ಅಧಿಕೃತ ಪರವಾನಗಿ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರಗಳ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೊತೆಗೆ ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಮುಂಗಾರು 2025- ರ ಹಂಗಾಮಿಗೆ ಒಟ್ಟು 31799 ಮೆಟ್ರಿಕ್ ಟನ್ ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14213 ಮೆಟ್ರಿಕ್ ಟನ್ ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜುವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಗಾಯಿತ್ರಿ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

9 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

9 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

12 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

15 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

17 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

21 hours ago