ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಚರ್ಚೆಗೆ ಸುನಿಲ್ ಕುಮಾರ್ ಒತ್ತಾಯ

ಕೋಲಾರ: ವಿಧಾನಮಂಡಲದ ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣ ಬಗ್ಗೆ ಹಾಗೂ ಶಾಶ್ವತವಾದ ನೀರಾವರಿ ಯೋಜನೆಗಳು ಕುರಿತಂತೆ ವಿಶೇಷ ಚರ್ಚೆ ನಡೆಸುವಂತೆ ಜೆಡಿಎಸ್‌ ಪಕ್ಷದ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯು ಮೊದಲಿನಿಂದಲೂ ಯಾವುದೇ ನದಿ ನಾಲೆಗಳು ಇಲ್ಲದೇ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾಗಿದ್ದು, ಜನ, ಜಾನುವಾರುಗಳಿಗೆ ಕುಡಿಯಲು ಮತ್ತು ಕೃಷಿ ಚಟುವಟಿಕೆಗಳ ಬಳಕೆಗಾಗಿ ಸುಮಾರು 1500 ಅಡಿ ಆಳದ ಕೊಳವೆಬಾವಿಯಿಂದ ನೀರು ತರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಅಂತಹ ಸಂದರ್ಭದಲ್ಲಿ ಅಂತರ್ಜಲ ವೃದ್ದಿಗಾಗಿ ಕೆ.ಸಿ ವ್ಯಾಲಿ ಯೋಜನೆ ಮೂಲಕ ನೀರು ತಂದಿದ್ದು, ಸಂತೋಷವಾದರೂ ಅದು ಮೂರನೇ ಹಂತದ ಶುದ್ದೀಕರಣ ಮಾಡಬೇಕಾಗಿದ್ದು, ಸರಕಾರದ ಜವಾಬ್ದಾರಿಯಾಗಿದ್ದು ಕೂಡಲೇ ಸರಕಾರವು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ದಾಹವನ್ನು ನೀಗಿಸುವ ಉದ್ದೇಶದಿಂದ ನೀರಾವರಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಹಲವು ದಶಕಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ಸರ್ಕಾರಗಳು ನಿರಂತರವಾಗಿ ಜನರಿಗೆ ಮೋಸ ಮಾಡಿಕೊಂಡೆ ಬಂದಿದ್ದಾರೆ ಬಯಲುಸೀಮೆ ಭಾಗದ ಜಿಲ್ಲೆಗೆ ಅನುಕೂಲಕರವಾದ ವೈಜ್ಞಾನಿಕ ಯೋಜನೆಗಳ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರೂ, ಅದನ್ನು ಪರಿಗಣಿಸಿಲ್ಲ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣದ ಬಗ್ಗೆಯೂ ನಿರ್ಲಕ್ಷ್ಯ ವಹಿಸಿದ್ದು ಸರಿಯಲ್ಲ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ಜಾರಿಗೆ ಮುಂದಾಗಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದರು.

ಬಹುದಿನಗಳಿಂದ ಕೂಡ ಅಮೆಗತಿಯಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆಗೆ ಆದಷ್ಟು ವೇಗ ನೀಡುವ ಮೂಲಕ ಜಿಲ್ಲೆಯ ಜನರಿಗೆ ನೀರು ತರುವ ಪ್ರಯತ್ನ ಮಾಡಬೇಕು ಜೊತೆಗೆ ಜಿಲ್ಲೆಗೆ ಲಕ್ಷ್ಮೀಸಾಗರ ಕೆರೆಯ ಮೂಲಕವೇ ಕೆ.ಸಿ ವ್ಯಾಲಿ ನೀರು ಹರಿಯುತ್ತಿದ್ದು ಆ ಭಾಗದ ಕೆರೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕಸಕಡ್ಡಿಗಳು ಕೊಳೆತು ಉತ್ಪತ್ತಿಯಾಗುವ ಕ್ರಿಮಿ ಕೀಟಗಳಿಂದ ಸೊಳ್ಳೆಗಳು ಹೆಚ್ಚಾಗಿವೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಕೂಡಲೇ ಕೆರೆಗಳನ್ನು ಸ್ವಚ್ಚತೆಯ ಕಡೆಗೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಗಮನ ಹರಿಸುವಂತೆ ಒತ್ತಾಯಿಸಿದರು.

Leave a Reply

Your email address will not be published. Required fields are marked *