Categories: ಕೋಲಾರ

ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಚರ್ಚೆಗೆ ಸುನಿಲ್ ಕುಮಾರ್ ಒತ್ತಾಯ

ಕೋಲಾರ: ವಿಧಾನಮಂಡಲದ ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣ ಬಗ್ಗೆ ಹಾಗೂ ಶಾಶ್ವತವಾದ ನೀರಾವರಿ ಯೋಜನೆಗಳು ಕುರಿತಂತೆ ವಿಶೇಷ ಚರ್ಚೆ ನಡೆಸುವಂತೆ ಜೆಡಿಎಸ್‌ ಪಕ್ಷದ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯು ಮೊದಲಿನಿಂದಲೂ ಯಾವುದೇ ನದಿ ನಾಲೆಗಳು ಇಲ್ಲದೇ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾಗಿದ್ದು, ಜನ, ಜಾನುವಾರುಗಳಿಗೆ ಕುಡಿಯಲು ಮತ್ತು ಕೃಷಿ ಚಟುವಟಿಕೆಗಳ ಬಳಕೆಗಾಗಿ ಸುಮಾರು 1500 ಅಡಿ ಆಳದ ಕೊಳವೆಬಾವಿಯಿಂದ ನೀರು ತರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಅಂತಹ ಸಂದರ್ಭದಲ್ಲಿ ಅಂತರ್ಜಲ ವೃದ್ದಿಗಾಗಿ ಕೆ.ಸಿ ವ್ಯಾಲಿ ಯೋಜನೆ ಮೂಲಕ ನೀರು ತಂದಿದ್ದು, ಸಂತೋಷವಾದರೂ ಅದು ಮೂರನೇ ಹಂತದ ಶುದ್ದೀಕರಣ ಮಾಡಬೇಕಾಗಿದ್ದು, ಸರಕಾರದ ಜವಾಬ್ದಾರಿಯಾಗಿದ್ದು ಕೂಡಲೇ ಸರಕಾರವು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ದಾಹವನ್ನು ನೀಗಿಸುವ ಉದ್ದೇಶದಿಂದ ನೀರಾವರಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಹಲವು ದಶಕಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ಸರ್ಕಾರಗಳು ನಿರಂತರವಾಗಿ ಜನರಿಗೆ ಮೋಸ ಮಾಡಿಕೊಂಡೆ ಬಂದಿದ್ದಾರೆ ಬಯಲುಸೀಮೆ ಭಾಗದ ಜಿಲ್ಲೆಗೆ ಅನುಕೂಲಕರವಾದ ವೈಜ್ಞಾನಿಕ ಯೋಜನೆಗಳ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರೂ, ಅದನ್ನು ಪರಿಗಣಿಸಿಲ್ಲ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣದ ಬಗ್ಗೆಯೂ ನಿರ್ಲಕ್ಷ್ಯ ವಹಿಸಿದ್ದು ಸರಿಯಲ್ಲ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ಜಾರಿಗೆ ಮುಂದಾಗಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದರು.

ಬಹುದಿನಗಳಿಂದ ಕೂಡ ಅಮೆಗತಿಯಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆಗೆ ಆದಷ್ಟು ವೇಗ ನೀಡುವ ಮೂಲಕ ಜಿಲ್ಲೆಯ ಜನರಿಗೆ ನೀರು ತರುವ ಪ್ರಯತ್ನ ಮಾಡಬೇಕು ಜೊತೆಗೆ ಜಿಲ್ಲೆಗೆ ಲಕ್ಷ್ಮೀಸಾಗರ ಕೆರೆಯ ಮೂಲಕವೇ ಕೆ.ಸಿ ವ್ಯಾಲಿ ನೀರು ಹರಿಯುತ್ತಿದ್ದು ಆ ಭಾಗದ ಕೆರೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕಸಕಡ್ಡಿಗಳು ಕೊಳೆತು ಉತ್ಪತ್ತಿಯಾಗುವ ಕ್ರಿಮಿ ಕೀಟಗಳಿಂದ ಸೊಳ್ಳೆಗಳು ಹೆಚ್ಚಾಗಿವೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಕೂಡಲೇ ಕೆರೆಗಳನ್ನು ಸ್ವಚ್ಚತೆಯ ಕಡೆಗೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಗಮನ ಹರಿಸುವಂತೆ ಒತ್ತಾಯಿಸಿದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

3 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

6 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago