Categories: ಕೋಲಾರ

ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಚರ್ಚೆಗೆ ಸುನಿಲ್ ಕುಮಾರ್ ಒತ್ತಾಯ

ಕೋಲಾರ: ವಿಧಾನಮಂಡಲದ ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣ ಬಗ್ಗೆ ಹಾಗೂ ಶಾಶ್ವತವಾದ ನೀರಾವರಿ ಯೋಜನೆಗಳು ಕುರಿತಂತೆ ವಿಶೇಷ ಚರ್ಚೆ ನಡೆಸುವಂತೆ ಜೆಡಿಎಸ್‌ ಪಕ್ಷದ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯು ಮೊದಲಿನಿಂದಲೂ ಯಾವುದೇ ನದಿ ನಾಲೆಗಳು ಇಲ್ಲದೇ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾಗಿದ್ದು, ಜನ, ಜಾನುವಾರುಗಳಿಗೆ ಕುಡಿಯಲು ಮತ್ತು ಕೃಷಿ ಚಟುವಟಿಕೆಗಳ ಬಳಕೆಗಾಗಿ ಸುಮಾರು 1500 ಅಡಿ ಆಳದ ಕೊಳವೆಬಾವಿಯಿಂದ ನೀರು ತರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಅಂತಹ ಸಂದರ್ಭದಲ್ಲಿ ಅಂತರ್ಜಲ ವೃದ್ದಿಗಾಗಿ ಕೆ.ಸಿ ವ್ಯಾಲಿ ಯೋಜನೆ ಮೂಲಕ ನೀರು ತಂದಿದ್ದು, ಸಂತೋಷವಾದರೂ ಅದು ಮೂರನೇ ಹಂತದ ಶುದ್ದೀಕರಣ ಮಾಡಬೇಕಾಗಿದ್ದು, ಸರಕಾರದ ಜವಾಬ್ದಾರಿಯಾಗಿದ್ದು ಕೂಡಲೇ ಸರಕಾರವು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ದಾಹವನ್ನು ನೀಗಿಸುವ ಉದ್ದೇಶದಿಂದ ನೀರಾವರಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಹಲವು ದಶಕಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ಸರ್ಕಾರಗಳು ನಿರಂತರವಾಗಿ ಜನರಿಗೆ ಮೋಸ ಮಾಡಿಕೊಂಡೆ ಬಂದಿದ್ದಾರೆ ಬಯಲುಸೀಮೆ ಭಾಗದ ಜಿಲ್ಲೆಗೆ ಅನುಕೂಲಕರವಾದ ವೈಜ್ಞಾನಿಕ ಯೋಜನೆಗಳ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರೂ, ಅದನ್ನು ಪರಿಗಣಿಸಿಲ್ಲ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣದ ಬಗ್ಗೆಯೂ ನಿರ್ಲಕ್ಷ್ಯ ವಹಿಸಿದ್ದು ಸರಿಯಲ್ಲ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ಜಾರಿಗೆ ಮುಂದಾಗಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದರು.

ಬಹುದಿನಗಳಿಂದ ಕೂಡ ಅಮೆಗತಿಯಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆಗೆ ಆದಷ್ಟು ವೇಗ ನೀಡುವ ಮೂಲಕ ಜಿಲ್ಲೆಯ ಜನರಿಗೆ ನೀರು ತರುವ ಪ್ರಯತ್ನ ಮಾಡಬೇಕು ಜೊತೆಗೆ ಜಿಲ್ಲೆಗೆ ಲಕ್ಷ್ಮೀಸಾಗರ ಕೆರೆಯ ಮೂಲಕವೇ ಕೆ.ಸಿ ವ್ಯಾಲಿ ನೀರು ಹರಿಯುತ್ತಿದ್ದು ಆ ಭಾಗದ ಕೆರೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕಸಕಡ್ಡಿಗಳು ಕೊಳೆತು ಉತ್ಪತ್ತಿಯಾಗುವ ಕ್ರಿಮಿ ಕೀಟಗಳಿಂದ ಸೊಳ್ಳೆಗಳು ಹೆಚ್ಚಾಗಿವೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಕೂಡಲೇ ಕೆರೆಗಳನ್ನು ಸ್ವಚ್ಚತೆಯ ಕಡೆಗೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಗಮನ ಹರಿಸುವಂತೆ ಒತ್ತಾಯಿಸಿದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago