Categories: ಕೋಲಾರ

ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಚರ್ಚೆಗೆ ಸುನಿಲ್ ಕುಮಾರ್ ಒತ್ತಾಯ

ಕೋಲಾರ: ವಿಧಾನಮಂಡಲದ ಅಧಿವೇಶನದಲ್ಲಿ ಕೆ.ಸಿ ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣ ಬಗ್ಗೆ ಹಾಗೂ ಶಾಶ್ವತವಾದ ನೀರಾವರಿ ಯೋಜನೆಗಳು ಕುರಿತಂತೆ ವಿಶೇಷ ಚರ್ಚೆ ನಡೆಸುವಂತೆ ಜೆಡಿಎಸ್‌ ಪಕ್ಷದ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯು ಮೊದಲಿನಿಂದಲೂ ಯಾವುದೇ ನದಿ ನಾಲೆಗಳು ಇಲ್ಲದೇ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾಗಿದ್ದು, ಜನ, ಜಾನುವಾರುಗಳಿಗೆ ಕುಡಿಯಲು ಮತ್ತು ಕೃಷಿ ಚಟುವಟಿಕೆಗಳ ಬಳಕೆಗಾಗಿ ಸುಮಾರು 1500 ಅಡಿ ಆಳದ ಕೊಳವೆಬಾವಿಯಿಂದ ನೀರು ತರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಅಂತಹ ಸಂದರ್ಭದಲ್ಲಿ ಅಂತರ್ಜಲ ವೃದ್ದಿಗಾಗಿ ಕೆ.ಸಿ ವ್ಯಾಲಿ ಯೋಜನೆ ಮೂಲಕ ನೀರು ತಂದಿದ್ದು, ಸಂತೋಷವಾದರೂ ಅದು ಮೂರನೇ ಹಂತದ ಶುದ್ದೀಕರಣ ಮಾಡಬೇಕಾಗಿದ್ದು, ಸರಕಾರದ ಜವಾಬ್ದಾರಿಯಾಗಿದ್ದು ಕೂಡಲೇ ಸರಕಾರವು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ದಾಹವನ್ನು ನೀಗಿಸುವ ಉದ್ದೇಶದಿಂದ ನೀರಾವರಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಹಲವು ದಶಕಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ಸರ್ಕಾರಗಳು ನಿರಂತರವಾಗಿ ಜನರಿಗೆ ಮೋಸ ಮಾಡಿಕೊಂಡೆ ಬಂದಿದ್ದಾರೆ ಬಯಲುಸೀಮೆ ಭಾಗದ ಜಿಲ್ಲೆಗೆ ಅನುಕೂಲಕರವಾದ ವೈಜ್ಞಾನಿಕ ಯೋಜನೆಗಳ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರೂ, ಅದನ್ನು ಪರಿಗಣಿಸಿಲ್ಲ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಯ ಮೂರನೇ ಹಂತದ ಶುದ್ದೀಕರಣದ ಬಗ್ಗೆಯೂ ನಿರ್ಲಕ್ಷ್ಯ ವಹಿಸಿದ್ದು ಸರಿಯಲ್ಲ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ಜಾರಿಗೆ ಮುಂದಾಗಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದರು.

ಬಹುದಿನಗಳಿಂದ ಕೂಡ ಅಮೆಗತಿಯಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆಗೆ ಆದಷ್ಟು ವೇಗ ನೀಡುವ ಮೂಲಕ ಜಿಲ್ಲೆಯ ಜನರಿಗೆ ನೀರು ತರುವ ಪ್ರಯತ್ನ ಮಾಡಬೇಕು ಜೊತೆಗೆ ಜಿಲ್ಲೆಗೆ ಲಕ್ಷ್ಮೀಸಾಗರ ಕೆರೆಯ ಮೂಲಕವೇ ಕೆ.ಸಿ ವ್ಯಾಲಿ ನೀರು ಹರಿಯುತ್ತಿದ್ದು ಆ ಭಾಗದ ಕೆರೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕಸಕಡ್ಡಿಗಳು ಕೊಳೆತು ಉತ್ಪತ್ತಿಯಾಗುವ ಕ್ರಿಮಿ ಕೀಟಗಳಿಂದ ಸೊಳ್ಳೆಗಳು ಹೆಚ್ಚಾಗಿವೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಕೂಡಲೇ ಕೆರೆಗಳನ್ನು ಸ್ವಚ್ಚತೆಯ ಕಡೆಗೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಗಮನ ಹರಿಸುವಂತೆ ಒತ್ತಾಯಿಸಿದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago