ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಗ್ರಾಮ ಪಂಚಾಯತಿಯ ಅಭಿವೃದ್ಧಿ ಸಾಧ್ಯ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‌ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಕೆಲಸ ನಿರ್ವಹಿಸಿ ಗ್ರಾಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೂಲಭೂತವಾಗಿ ಗ್ರಾಮಗಳು ಅಭಿವೃದ್ಧಿಯಾಗಬೇಕಾದರೆ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳ ಪ್ರಮುಖ ಪಾತ್ರವಿದೆ. ಮಹಾತ್ಮ ಗಾಂಧೀಜಿಯವರು ಗ್ರಾಮಸ್ವರಾಜ್ಯ ಘೋಷಿಸಿದರು. ಆಹಾರ, ಬಟ್ಟೆಗಳನ್ನು ಸ್ವತಃ ತಾವೇ ತಯಾರಿಸಿ ಸ್ವಾವಲಂಬಿಗಳಾಗಿ ಬೇರಯವರ ಮೇಲೆ ಅವಲಂಬಿತರಾಗದೆ ಬದುಕಬೇಕು ಎಂದರು.

ಪಂಡಿತ್ ಜವಾಹರ್ ಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್ ರಂತಹ ಮಹಾನ್ ಚೇತನರು ಹೊರಾಟಗಳ ನಡೆಸಿದ್ದಾರೆ. ಎಷ್ಟೋ ಹೋರಾಟಗಾರರು ಪ್ರಾಣ ಬಲಿದಾನ ನೀಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸ್ವಾತಂತ್ರ್ಯ ಎಂದರೆ ಯಾರ ಮೇಲು ಅವಲಂಬನೆಯಾಗದೆ ಬದುಕುವುದು. ಸಮಾಜದ ಕಟ್ಟಕಡೆಯ ವ್ಯಕ್ತಿಗು ಸಮಾನತೆ ಸಿಗಬೇಕು‌ ಆಗಲೇ ಸ್ವಾತಂತ್ರ್ಯಕ್ಕೆ ಅರ್ಥ ಎಂದು ಹೇಳಿದರು. ಗ್ರಾಮಗಳಲ್ಲಿನ ಕೆರೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ನರೇಗಾ ಕೆಲಸಗಳು ಪ್ರಾಮಾಣಿಕವಾಗಿ ಆಗಬೇಕು. ಗ್ರಾಪಂ ಅಧ್ಯಕ್ಷರು, ಸದಸ್ಯರು ಹೇಳಿದ್ದನ್ನು ಅಧಿಕಾರಿಗಳು ಎಚ್ಚರಿಕೆಯಿಂದ ಕೇಳಿ ಪಾಲಿಸಬೇಕು. ಗ್ರಾಮ ಪಂಚಾಯಿತಿ ನಮ್ಮದೆಂಬ ಭಾವನೆಯಿಂದ ಅದನ್ನು ಅಭಿವೃದ್ಧಿ ಪಡಿಸಲು ಒಗ್ಗೂಡಿ ಚಿಂತನೆ ನಡೆಸಬೇಕು. ಶಾಲೆಗಳ‌ ಅಭಿವೃದ್ಧಿ ಜೊತೆಗೆ ಕೆರೆಗಳ ಅಭಿವೃದ್ಧಿಯು ಬಹಳ ಮುಖ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ. ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಅಭಿವೃದ್ಧಿಯನ್ನು ಪರಿಶೀಲನೆ ಮಾಡುತ್ತೇನೆ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯತಿಗಳಿಂದ ಮಾತ್ರ ಬದಲಾವಣೆ ತರಲು ಸಾದ್ಯ. ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳ ಒದಗಿಸುವುದು ಗ್ರಾಮ ಪಂಚಾಯತಿ. ಗ್ರಾಮದ ಹಿತಾಸಕ್ತಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳ ಪಾತ್ರ ಬಹುಮುಖ್ಯ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಶೇ50 ರಷ್ಟು ಸಮಸ್ಯೆ ಬಗೆಹರಿದರೆ ತಾಲ್ಲೂಕು ಮಟ್ಟದಲ್ಲಿ ಜನರ ಅಲೆದಾಟ ತಪ್ಪುತ್ತದೆ. ರೈತರ, ಜನಸಾಮಾನ್ಯರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಿ. ಜನಸ್ನೇಹಿ ಆಡಳಿತ ನೀಡಿ. ಸಾರ್ವಜನಿಕ ಪರವಾಗಿ ಕೆಲಸ ಮಾಡಿ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಅ.ದೇವೇಗೌಡ ಮಾತನಾಡಿ ಅಂಬೇಡ್ಕರ್ ರವರು ಕೊಟ್ಟ ಸಂವಿಧಾನದಿಂದ ಮಹಿಳೆಯರಿಗು ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಸಿಗುತ್ತಿದೆ. ಅಧಿಕಾರಿಗಳು, ಅಧ್ಯಕ್ಷರುಗಳು ಸಮನ್ವಯ ಸಾಧಿಸಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಗ್ರಾಮ ಪಂಚಾಯತಿಗೆ ಹೆಚ್ಚಿನ ಅಧಿಕಾರವನ್ನು ಸರ್ಕಾರ ನೀಡಿದೆ ಎಂದರು.

ಭಾರತದ ನಿಜವಾದ ಶಕ್ತಿ ಗ್ರಾಮಗಳು. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾದ್ಯ. ಇದು ಗಾಂಧಿಜೀಯವರ ಕನಸು ಎಂದರು. ಕನ್ನಡ ಶಾಲೆಯ ಉಳಿವಿಗೆ ಶ್ರಮ ವಹಿಸಿ ಕನ್ನಡ ಭಾಷೆಯನ್ನು ಬಳಸಬೇಕು. ಭಾರತದ ಆತ್ಮ ಗ್ರಾಮಗಳು. ಸ್ವಚ್ಚ ಭಾರತಕ್ಕೆ ಒತ್ತು ನೀಡಬೇಕು ಗ್ರಾಮದ ಸ್ವಚ್ಚತೆಗೆ ಆಧ್ಯತೆ ನೀಡಿ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕೊನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಮಂಜುನಾಥ್, ಉಪಾಧ್ಯಕ್ಷರಾದ ಪುಷ್ಪ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್ ಅನುರಾಧ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

7 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

20 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

22 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

23 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

24 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago