ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಗ್ರಾಮ ಪಂಚಾಯತಿಯ ಅಭಿವೃದ್ಧಿ ಸಾಧ್ಯ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‌ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳ ಸಮನ್ವಯದಿಂದ ಕೆಲಸ ನಿರ್ವಹಿಸಿ ಗ್ರಾಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೂಲಭೂತವಾಗಿ ಗ್ರಾಮಗಳು ಅಭಿವೃದ್ಧಿಯಾಗಬೇಕಾದರೆ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳ ಪ್ರಮುಖ ಪಾತ್ರವಿದೆ. ಮಹಾತ್ಮ ಗಾಂಧೀಜಿಯವರು ಗ್ರಾಮಸ್ವರಾಜ್ಯ ಘೋಷಿಸಿದರು. ಆಹಾರ, ಬಟ್ಟೆಗಳನ್ನು ಸ್ವತಃ ತಾವೇ ತಯಾರಿಸಿ ಸ್ವಾವಲಂಬಿಗಳಾಗಿ ಬೇರಯವರ ಮೇಲೆ ಅವಲಂಬಿತರಾಗದೆ ಬದುಕಬೇಕು ಎಂದರು.

ಪಂಡಿತ್ ಜವಾಹರ್ ಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್ ರಂತಹ ಮಹಾನ್ ಚೇತನರು ಹೊರಾಟಗಳ ನಡೆಸಿದ್ದಾರೆ. ಎಷ್ಟೋ ಹೋರಾಟಗಾರರು ಪ್ರಾಣ ಬಲಿದಾನ ನೀಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸ್ವಾತಂತ್ರ್ಯ ಎಂದರೆ ಯಾರ ಮೇಲು ಅವಲಂಬನೆಯಾಗದೆ ಬದುಕುವುದು. ಸಮಾಜದ ಕಟ್ಟಕಡೆಯ ವ್ಯಕ್ತಿಗು ಸಮಾನತೆ ಸಿಗಬೇಕು‌ ಆಗಲೇ ಸ್ವಾತಂತ್ರ್ಯಕ್ಕೆ ಅರ್ಥ ಎಂದು ಹೇಳಿದರು. ಗ್ರಾಮಗಳಲ್ಲಿನ ಕೆರೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ನರೇಗಾ ಕೆಲಸಗಳು ಪ್ರಾಮಾಣಿಕವಾಗಿ ಆಗಬೇಕು. ಗ್ರಾಪಂ ಅಧ್ಯಕ್ಷರು, ಸದಸ್ಯರು ಹೇಳಿದ್ದನ್ನು ಅಧಿಕಾರಿಗಳು ಎಚ್ಚರಿಕೆಯಿಂದ ಕೇಳಿ ಪಾಲಿಸಬೇಕು. ಗ್ರಾಮ ಪಂಚಾಯಿತಿ ನಮ್ಮದೆಂಬ ಭಾವನೆಯಿಂದ ಅದನ್ನು ಅಭಿವೃದ್ಧಿ ಪಡಿಸಲು ಒಗ್ಗೂಡಿ ಚಿಂತನೆ ನಡೆಸಬೇಕು. ಶಾಲೆಗಳ‌ ಅಭಿವೃದ್ಧಿ ಜೊತೆಗೆ ಕೆರೆಗಳ ಅಭಿವೃದ್ಧಿಯು ಬಹಳ ಮುಖ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ. ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಅಭಿವೃದ್ಧಿಯನ್ನು ಪರಿಶೀಲನೆ ಮಾಡುತ್ತೇನೆ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯತಿಗಳಿಂದ ಮಾತ್ರ ಬದಲಾವಣೆ ತರಲು ಸಾದ್ಯ. ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳ ಒದಗಿಸುವುದು ಗ್ರಾಮ ಪಂಚಾಯತಿ. ಗ್ರಾಮದ ಹಿತಾಸಕ್ತಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳ ಪಾತ್ರ ಬಹುಮುಖ್ಯ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಶೇ50 ರಷ್ಟು ಸಮಸ್ಯೆ ಬಗೆಹರಿದರೆ ತಾಲ್ಲೂಕು ಮಟ್ಟದಲ್ಲಿ ಜನರ ಅಲೆದಾಟ ತಪ್ಪುತ್ತದೆ. ರೈತರ, ಜನಸಾಮಾನ್ಯರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಿ. ಜನಸ್ನೇಹಿ ಆಡಳಿತ ನೀಡಿ. ಸಾರ್ವಜನಿಕ ಪರವಾಗಿ ಕೆಲಸ ಮಾಡಿ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಅ.ದೇವೇಗೌಡ ಮಾತನಾಡಿ ಅಂಬೇಡ್ಕರ್ ರವರು ಕೊಟ್ಟ ಸಂವಿಧಾನದಿಂದ ಮಹಿಳೆಯರಿಗು ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಸಿಗುತ್ತಿದೆ. ಅಧಿಕಾರಿಗಳು, ಅಧ್ಯಕ್ಷರುಗಳು ಸಮನ್ವಯ ಸಾಧಿಸಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಗ್ರಾಮ ಪಂಚಾಯತಿಗೆ ಹೆಚ್ಚಿನ ಅಧಿಕಾರವನ್ನು ಸರ್ಕಾರ ನೀಡಿದೆ ಎಂದರು.

ಭಾರತದ ನಿಜವಾದ ಶಕ್ತಿ ಗ್ರಾಮಗಳು. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾದ್ಯ. ಇದು ಗಾಂಧಿಜೀಯವರ ಕನಸು ಎಂದರು. ಕನ್ನಡ ಶಾಲೆಯ ಉಳಿವಿಗೆ ಶ್ರಮ ವಹಿಸಿ ಕನ್ನಡ ಭಾಷೆಯನ್ನು ಬಳಸಬೇಕು. ಭಾರತದ ಆತ್ಮ ಗ್ರಾಮಗಳು. ಸ್ವಚ್ಚ ಭಾರತಕ್ಕೆ ಒತ್ತು ನೀಡಬೇಕು ಗ್ರಾಮದ ಸ್ವಚ್ಚತೆಗೆ ಆಧ್ಯತೆ ನೀಡಿ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕೊನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಮಂಜುನಾಥ್, ಉಪಾಧ್ಯಕ್ಷರಾದ ಪುಷ್ಪ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್ ಅನುರಾಧ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

4 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

5 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

6 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

13 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago