Categories: ಕೋಲಾರ

ಅನಧಿಕೃತವಾದ ಬಾವುಟ, ಬಂಟಿಂಗ್ಸ್ ತೆರವುಗೊಳಿಸುವಂತೆ ಓಂಶಕ್ತಿ ಚಲಪತಿ ಒತ್ತಾಯ

ಕೋಲಾರ: ಜಿಲ್ಲೆಯಾದ್ಯಂತ ಅನುಮತಿ ಪಡೆಯದೆ ಅನಧಿಕೃತವಾಗಿ ಕಾನೂನು ಉಲ್ಲಂಘನೆ ಮಾಡಿ ನಿರ್ಮಿಸಿರುವ ಧ್ವಜಸ್ತಂಭ, ಬಾವುಟಗಳು, ಬಂಟಿಂಗ್ಸ್ ಸೇರಿದಂತೆ ಮತೀಯ ಭಾವನೆಗಳಿಗೆ ಧಕ್ಕೆ ತರುವ ಅಕ್ರಮ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ಅದೇಶದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಕೂಡಲೇ ತೆರವುಗೊಳಿಸಲು ಮುಂದಾಗಬೇಕು ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಒತ್ತಾಯಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿನ ಘಟನೆಯ ಆಧಾರಿಸಿ ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶವು ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರದ ಕಾನೂನಿನಲ್ಲಿ ಎಲ್ಲಾ ಜಾತಿ ಧರ್ಮಗಳಿಗೂ ಅನ್ವಯಿಸುತ್ತದೆ. ಸರಕಾರವು ಒಂದು ಜಾತಿ ಧರ್ಮವನ್ನು ಒಲೈಕೆ ಮಾಡುವುದನ್ನು ಬಿಟ್ಟು ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ನಗರದ ಗಂಗಮ್ಮನ ಗುಡಿಯ ರಂಗನ ಬಾವಿಯ ಕಲ್ಯಾಣಿ, ಸಂಗೊಂಡಹಳ್ಳಿಯ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಇದ್ದ ಕಲ್ಯಾಣಿ, ನಗರದ ಕ್ಲಾರ್ಕ್ ಟವರ್ ನಲ್ಲಿಯಲ್ಲಿ ಚಂದ್ರ ಆಕೃತಿಯ ನಕ್ಷತ್ರ, ಎಂಜಿ ರಸ್ತೆಯ ಮಸೀದಿ ಬಳಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಂಡು ಒತ್ತಾಯಿಸುತ್ತಾ ಇದ್ದು ಕೂಡಲೇ ತೆರೆವುಗೊಳಿಸಿ ಸಂವಿಧಾನದ ಕಾನೂನು ಪಾಲನೆ ಮಾಡಬೇಕು ಯಾವುದೇ ಧರ್ಮವಾಗಲಿ ಬೇಧಭಾವವನ್ನು ಮಾಡಬಾರದು ಎಂದರು.

ನಗರದ ಕೋಲಾರಮ್ಮ ಮತ್ತು ಸೋಮೇಶ್ವರ ದೇವಾಲಯದ ಸುತ್ತಮುತ್ತಲಿರುವ 100 ಮೀಟರ್ ಒಳಗಿನ ಯಾವುದೇ ಅಕ್ರಮ ಕಟ್ಟಡಗಳನ್ನು ಕಟ್ಟಬಾರದು ಎಂದು ಪ್ರಾಚೀನ ಪುರಾತತ್ವ ಇಲಾಖೆಯ ಆದೇಶವಿದ್ದು, ಕೂಡಲೇ ತೆರೆವುಗೊಳಿಸಿ ಜೊತೆಗೆ ಜಿಲ್ಲೆಯಲ್ಲಿ ದೇವಾಯಗಳ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದರೆ ಕ್ರಮ ವಹಿಸಬೇಕು ಜೊತೆಗೆ ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ಅಧಿಕಾರಿ ವರ್ಗದವರು ಮತ್ತು ಜನಪ್ರತಿನಿಧಿಗಳು ಒಂದು ಧರ್ಮದವರನ್ನು ಒಲೈಕೆ ಮಾಡಲು ಹೊರಟಿದ್ದಾರೆ. ಅವರಿಗೆ ಅಂಬೇಡ್ಕರ್ ಸಂವಿಧಾನದ ಕಾನೂನು ಅರಿವಾಗಬೇಕು ಇಲ್ಲದೇ ಹೋದರೆ ಮುಂದೆ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಇದ್ದರು

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago