ಕೋಲಾರ: ಜಿಲ್ಲೆಯಾದ್ಯಂತ ಅನುಮತಿ ಪಡೆಯದೆ ಅನಧಿಕೃತವಾಗಿ ಕಾನೂನು ಉಲ್ಲಂಘನೆ ಮಾಡಿ ನಿರ್ಮಿಸಿರುವ ಧ್ವಜಸ್ತಂಭ, ಬಾವುಟಗಳು, ಬಂಟಿಂಗ್ಸ್ ಸೇರಿದಂತೆ ಮತೀಯ ಭಾವನೆಗಳಿಗೆ ಧಕ್ಕೆ ತರುವ ಅಕ್ರಮ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ಅದೇಶದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಕೂಡಲೇ ತೆರವುಗೊಳಿಸಲು ಮುಂದಾಗಬೇಕು ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಒತ್ತಾಯಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿನ ಘಟನೆಯ ಆಧಾರಿಸಿ ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶವು ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರದ ಕಾನೂನಿನಲ್ಲಿ ಎಲ್ಲಾ ಜಾತಿ ಧರ್ಮಗಳಿಗೂ ಅನ್ವಯಿಸುತ್ತದೆ. ಸರಕಾರವು ಒಂದು ಜಾತಿ ಧರ್ಮವನ್ನು ಒಲೈಕೆ ಮಾಡುವುದನ್ನು ಬಿಟ್ಟು ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ನಗರದ ಗಂಗಮ್ಮನ ಗುಡಿಯ ರಂಗನ ಬಾವಿಯ ಕಲ್ಯಾಣಿ, ಸಂಗೊಂಡಹಳ್ಳಿಯ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಇದ್ದ ಕಲ್ಯಾಣಿ, ನಗರದ ಕ್ಲಾರ್ಕ್ ಟವರ್ ನಲ್ಲಿಯಲ್ಲಿ ಚಂದ್ರ ಆಕೃತಿಯ ನಕ್ಷತ್ರ, ಎಂಜಿ ರಸ್ತೆಯ ಮಸೀದಿ ಬಳಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಂಡು ಒತ್ತಾಯಿಸುತ್ತಾ ಇದ್ದು ಕೂಡಲೇ ತೆರೆವುಗೊಳಿಸಿ ಸಂವಿಧಾನದ ಕಾನೂನು ಪಾಲನೆ ಮಾಡಬೇಕು ಯಾವುದೇ ಧರ್ಮವಾಗಲಿ ಬೇಧಭಾವವನ್ನು ಮಾಡಬಾರದು ಎಂದರು.
ನಗರದ ಕೋಲಾರಮ್ಮ ಮತ್ತು ಸೋಮೇಶ್ವರ ದೇವಾಲಯದ ಸುತ್ತಮುತ್ತಲಿರುವ 100 ಮೀಟರ್ ಒಳಗಿನ ಯಾವುದೇ ಅಕ್ರಮ ಕಟ್ಟಡಗಳನ್ನು ಕಟ್ಟಬಾರದು ಎಂದು ಪ್ರಾಚೀನ ಪುರಾತತ್ವ ಇಲಾಖೆಯ ಆದೇಶವಿದ್ದು, ಕೂಡಲೇ ತೆರೆವುಗೊಳಿಸಿ ಜೊತೆಗೆ ಜಿಲ್ಲೆಯಲ್ಲಿ ದೇವಾಯಗಳ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದರೆ ಕ್ರಮ ವಹಿಸಬೇಕು ಜೊತೆಗೆ ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ಅಧಿಕಾರಿ ವರ್ಗದವರು ಮತ್ತು ಜನಪ್ರತಿನಿಧಿಗಳು ಒಂದು ಧರ್ಮದವರನ್ನು ಒಲೈಕೆ ಮಾಡಲು ಹೊರಟಿದ್ದಾರೆ. ಅವರಿಗೆ ಅಂಬೇಡ್ಕರ್ ಸಂವಿಧಾನದ ಕಾನೂನು ಅರಿವಾಗಬೇಕು ಇಲ್ಲದೇ ಹೋದರೆ ಮುಂದೆ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಇದ್ದರು
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…