ಕೋಲಾರ: ಜಿಲ್ಲೆಯಾದ್ಯಂತ ಅನುಮತಿ ಪಡೆಯದೆ ಅನಧಿಕೃತವಾಗಿ ಕಾನೂನು ಉಲ್ಲಂಘನೆ ಮಾಡಿ ನಿರ್ಮಿಸಿರುವ ಧ್ವಜಸ್ತಂಭ, ಬಾವುಟಗಳು, ಬಂಟಿಂಗ್ಸ್ ಸೇರಿದಂತೆ ಮತೀಯ ಭಾವನೆಗಳಿಗೆ ಧಕ್ಕೆ ತರುವ ಅಕ್ರಮ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ಅದೇಶದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಕೂಡಲೇ ತೆರವುಗೊಳಿಸಲು ಮುಂದಾಗಬೇಕು ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಒತ್ತಾಯಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿನ ಘಟನೆಯ ಆಧಾರಿಸಿ ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶವು ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರದ ಕಾನೂನಿನಲ್ಲಿ ಎಲ್ಲಾ ಜಾತಿ ಧರ್ಮಗಳಿಗೂ ಅನ್ವಯಿಸುತ್ತದೆ. ಸರಕಾರವು ಒಂದು ಜಾತಿ ಧರ್ಮವನ್ನು ಒಲೈಕೆ ಮಾಡುವುದನ್ನು ಬಿಟ್ಟು ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಈಗಾಗಲೇ ನಗರದ ಗಂಗಮ್ಮನ ಗುಡಿಯ ರಂಗನ ಬಾವಿಯ ಕಲ್ಯಾಣಿ, ಸಂಗೊಂಡಹಳ್ಳಿಯ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಇದ್ದ ಕಲ್ಯಾಣಿ, ನಗರದ ಕ್ಲಾರ್ಕ್ ಟವರ್ ನಲ್ಲಿಯಲ್ಲಿ ಚಂದ್ರ ಆಕೃತಿಯ ನಕ್ಷತ್ರ, ಎಂಜಿ ರಸ್ತೆಯ ಮಸೀದಿ ಬಳಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಂಡು ಒತ್ತಾಯಿಸುತ್ತಾ ಇದ್ದು ಕೂಡಲೇ ತೆರೆವುಗೊಳಿಸಿ ಸಂವಿಧಾನದ ಕಾನೂನು ಪಾಲನೆ ಮಾಡಬೇಕು ಯಾವುದೇ ಧರ್ಮವಾಗಲಿ ಬೇಧಭಾವವನ್ನು ಮಾಡಬಾರದು ಎಂದರು.
ನಗರದ ಕೋಲಾರಮ್ಮ ಮತ್ತು ಸೋಮೇಶ್ವರ ದೇವಾಲಯದ ಸುತ್ತಮುತ್ತಲಿರುವ 100 ಮೀಟರ್ ಒಳಗಿನ ಯಾವುದೇ ಅಕ್ರಮ ಕಟ್ಟಡಗಳನ್ನು ಕಟ್ಟಬಾರದು ಎಂದು ಪ್ರಾಚೀನ ಪುರಾತತ್ವ ಇಲಾಖೆಯ ಆದೇಶವಿದ್ದು, ಕೂಡಲೇ ತೆರೆವುಗೊಳಿಸಿ ಜೊತೆಗೆ ಜಿಲ್ಲೆಯಲ್ಲಿ ದೇವಾಯಗಳ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದರೆ ಕ್ರಮ ವಹಿಸಬೇಕು ಜೊತೆಗೆ ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ಅಧಿಕಾರಿ ವರ್ಗದವರು ಮತ್ತು ಜನಪ್ರತಿನಿಧಿಗಳು ಒಂದು ಧರ್ಮದವರನ್ನು ಒಲೈಕೆ ಮಾಡಲು ಹೊರಟಿದ್ದಾರೆ. ಅವರಿಗೆ ಅಂಬೇಡ್ಕರ್ ಸಂವಿಧಾನದ ಕಾನೂನು ಅರಿವಾಗಬೇಕು ಇಲ್ಲದೇ ಹೋದರೆ ಮುಂದೆ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಇದ್ದರು
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…