ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ/ ಮಟ್ಕಾ ಹಾವಳಿಯ ನಿಯಂತ್ರಣದ ಬಗ್ಗೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಅನಧಿಕೃತವಾಗಿ ನಡೆಸುವ ಲಾಟರಿ ಹಾಗೂ ಮಟ್ಕಾ ದಂಧೆಯನ್ನು ಸಂಪೂರ್ಣವಾಗಿ ರಾಜ್ಯದಾದ್ಯಂತ ನಿಷೇಧಿಸಿದೆ. ಅನಧಿಕೃತವಾಗಿ ಲಾಟರಿ- ಮಟ್ಕಾ ದಂಧೆಯನ್ನು ನಡೆಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. 2024 ನೇ ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಮಟ್ಕಾ ಹಾವಳಿಯ ಒಂದು ಪ್ರಕರಣ ಕಂಡುಬಂದಿತ್ತು. ಅಕ್ರಮವಾಗಿ ಮಟ್ಕಾ ಜೂಜಾಟಕ್ಕೆ ಸಾರ್ವಜನಿಕರಿಂದ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು. ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹೇಳಿದರು.
ಸಾರ್ವಜನಿಕರಿಗೆ ಲಾಟರಿ- ಮಟ್ಕಾ ಹಾವಳಿ ಬಗ್ಗೆ ಅರಿವು ಮೂಡಿಸಿ, ಹಿಂದಿನ ಪ್ರಕರಣಗಳು ಕಂಡು ಬಂದ ಪ್ರದೇಶಗಳಲ್ಲಿ ಆಗಿಂದಾಗ್ಗೆ ಗಸ್ತು ಹೋಗಬೇಕು. ಕಾಲಕಾಲಕ್ಕೆ ಸಭೆ ನಡೆಸಿ ಲಾಟರಿ ಮಟ್ಕಾ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್, ಪಿಂಚಣಿ , ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ವೇತ ಪ್ರಿಯದರ್ಶಿನಿ ಹಾಗು ಮುರಳಿ ಮೋಹನ್ ಉಪಸ್ಥಿತರಿದ್ದರು.
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…
ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…
ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ…
ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…