ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ/ ಮಟ್ಕಾ ಹಾವಳಿಯ ನಿಯಂತ್ರಣದ ಬಗ್ಗೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಅನಧಿಕೃತವಾಗಿ ನಡೆಸುವ ಲಾಟರಿ ಹಾಗೂ ಮಟ್ಕಾ ದಂಧೆಯನ್ನು ಸಂಪೂರ್ಣವಾಗಿ ರಾಜ್ಯದಾದ್ಯಂತ ನಿಷೇಧಿಸಿದೆ. ಅನಧಿಕೃತವಾಗಿ ಲಾಟರಿ- ಮಟ್ಕಾ ದಂಧೆಯನ್ನು ನಡೆಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. 2024 ನೇ ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಮಟ್ಕಾ ಹಾವಳಿಯ ಒಂದು ಪ್ರಕರಣ ಕಂಡುಬಂದಿತ್ತು. ಅಕ್ರಮವಾಗಿ ಮಟ್ಕಾ ಜೂಜಾಟಕ್ಕೆ ಸಾರ್ವಜನಿಕರಿಂದ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು. ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹೇಳಿದರು.
ಸಾರ್ವಜನಿಕರಿಗೆ ಲಾಟರಿ- ಮಟ್ಕಾ ಹಾವಳಿ ಬಗ್ಗೆ ಅರಿವು ಮೂಡಿಸಿ, ಹಿಂದಿನ ಪ್ರಕರಣಗಳು ಕಂಡು ಬಂದ ಪ್ರದೇಶಗಳಲ್ಲಿ ಆಗಿಂದಾಗ್ಗೆ ಗಸ್ತು ಹೋಗಬೇಕು. ಕಾಲಕಾಲಕ್ಕೆ ಸಭೆ ನಡೆಸಿ ಲಾಟರಿ ಮಟ್ಕಾ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್, ಪಿಂಚಣಿ , ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ವೇತ ಪ್ರಿಯದರ್ಶಿನಿ ಹಾಗು ಮುರಳಿ ಮೋಹನ್ ಉಪಸ್ಥಿತರಿದ್ದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…