ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ/ ಮಟ್ಕಾ ಹಾವಳಿಯ ನಿಯಂತ್ರಣದ ಬಗ್ಗೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಅನಧಿಕೃತವಾಗಿ ನಡೆಸುವ ಲಾಟರಿ ಹಾಗೂ ಮಟ್ಕಾ ದಂಧೆಯನ್ನು ಸಂಪೂರ್ಣವಾಗಿ ರಾಜ್ಯದಾದ್ಯಂತ ನಿಷೇಧಿಸಿದೆ. ಅನಧಿಕೃತವಾಗಿ ಲಾಟರಿ- ಮಟ್ಕಾ ದಂಧೆಯನ್ನು ನಡೆಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. 2024 ನೇ ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಮಟ್ಕಾ ಹಾವಳಿಯ ಒಂದು ಪ್ರಕರಣ ಕಂಡುಬಂದಿತ್ತು. ಅಕ್ರಮವಾಗಿ ಮಟ್ಕಾ ಜೂಜಾಟಕ್ಕೆ ಸಾರ್ವಜನಿಕರಿಂದ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು. ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹೇಳಿದರು.
ಸಾರ್ವಜನಿಕರಿಗೆ ಲಾಟರಿ- ಮಟ್ಕಾ ಹಾವಳಿ ಬಗ್ಗೆ ಅರಿವು ಮೂಡಿಸಿ, ಹಿಂದಿನ ಪ್ರಕರಣಗಳು ಕಂಡು ಬಂದ ಪ್ರದೇಶಗಳಲ್ಲಿ ಆಗಿಂದಾಗ್ಗೆ ಗಸ್ತು ಹೋಗಬೇಕು. ಕಾಲಕಾಲಕ್ಕೆ ಸಭೆ ನಡೆಸಿ ಲಾಟರಿ ಮಟ್ಕಾ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್, ಪಿಂಚಣಿ , ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ವೇತ ಪ್ರಿಯದರ್ಶಿನಿ ಹಾಗು ಮುರಳಿ ಮೋಹನ್ ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…