ರಾಜ್ಯಾದ್ಯಂತ ಅನಧಿಕೃತ ಲಾಟರಿ-ಮಟ್ಕಾ ಮಾರಾಟ ಈಗಾಗಲೇ ನಿಷೇಧಿಸಲಾಗಿದ್ದು ಜಿಲ್ಲೆಯಲ್ಲಿ ಎಲ್ಲಿಯಾದರೂ ಅನಧಿಕೃತ ಲಾಟರಿ-ಮಟ್ಕಾ ಹಾವಳಿ ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ/ ಮಟ್ಕಾ ಹಾವಳಿಯ ನಿಯಂತ್ರಣದ ಬಗ್ಗೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಅನಧಿಕೃತವಾಗಿ ನಡೆಸುವ ಲಾಟರಿ ಹಾಗೂ ಮಟ್ಕಾ ದಂಧೆಯನ್ನು ಸಂಪೂರ್ಣವಾಗಿ ರಾಜ್ಯದಾದ್ಯಂತ ನಿಷೇಧಿಸಿದೆ. ಅನಧಿಕೃತವಾಗಿ ಲಾಟರಿ- ಮಟ್ಕಾ ದಂಧೆಯನ್ನು ನಡೆಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. 2024 ನೇ ಸಾಲಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಮಟ್ಕಾ ಹಾವಳಿಯ ಒಂದು ಪ್ರಕರಣ ಕಂಡುಬಂದಿತ್ತು. ಅಕ್ರಮವಾಗಿ ಮಟ್ಕಾ ಜೂಜಾಟಕ್ಕೆ ಸಾರ್ವಜನಿಕರಿಂದ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದರು. ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹೇಳಿದರು.
ಸಾರ್ವಜನಿಕರಿಗೆ ಲಾಟರಿ- ಮಟ್ಕಾ ಹಾವಳಿ ಬಗ್ಗೆ ಅರಿವು ಮೂಡಿಸಿ, ಹಿಂದಿನ ಪ್ರಕರಣಗಳು ಕಂಡು ಬಂದ ಪ್ರದೇಶಗಳಲ್ಲಿ ಆಗಿಂದಾಗ್ಗೆ ಗಸ್ತು ಹೋಗಬೇಕು. ಕಾಲಕಾಲಕ್ಕೆ ಸಭೆ ನಡೆಸಿ ಲಾಟರಿ ಮಟ್ಕಾ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್, ಪಿಂಚಣಿ , ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ವೇತ ಪ್ರಿಯದರ್ಶಿನಿ ಹಾಗು ಮುರಳಿ ಮೋಹನ್ ಉಪಸ್ಥಿತರಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…