ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ


ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಸ್ಪರ್ಶ ಸಂಸ್ಥೆ, ಮಕ್ಕಳ ನ್ಯಾಯ (ರಕ್ಷಣೆ ಮತ್ತು ಪೋಷಣೆ) ಕಾಯಿದೆ 2015ರ ಅಡಿಯಲ್ಲಿ ನೋಂದಾಯಿಸಿಕೊಂಡು, ರಕ್ಷಣೆ ಮತ್ತು ಪೋಷಣೆ ಅಗತ್ಯವಿರುವ ಮಕ್ಕಳಿಗೆ ಆಶ್ರಯ, ಶಿಕ್ಷಣ ಮತ್ತು ಜೀವನದ ದಿಕ್ಕು ನೀಡುತ್ತಿರುವ ಪ್ರಮುಖ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇವನಹಳ್ಳಿಯ ಮಕ್ಕಳ ಧಾಮದಲ್ಲಿ ಹೆಣ್ಣುಮಕ್ಕಳಿಗೆ ಹಾಗೂ ಹೆಸರುಘಟ್ಟದ ಸಮೀಪದ ನಿಸರ್ಗ ಗ್ರಾಮದಲ್ಲಿ ಗಂಡುಮಕ್ಕಳಿಗೆ ನೀಡುತ್ತಿರುವ ಸಂರಕ್ಷಣಾ ವ್ಯವಸ್ಥೆ, “ಎಲ್ಲಾ ಮಕ್ಕಳಿಗೂ ಗುಣಮಟ್ಟದ ಮತ್ತು ಸಮಾನ ಶಿಕ್ಷಣ” ಎಂಬ ಗುರಿಯನ್ನು ಅರ್ಥಪೂರ್ಣವಾಗಿ ಸಾಕಾರಗೊಳಿಸುತ್ತಿದೆ. ಈ ಪಾಲನಾ ಗೃಹಗಳಲ್ಲಿ ಬೆಳೆದ ಅನೇಕ ಮಕ್ಕಳು ಇಂದು ಉನ್ನತ ಶಿಕ್ಷಣ ಪಡೆದು ಪದವೀಧರರಾಗಿ ಸಮಾಜದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿರುವುದು ಸಂಸ್ಥೆಯ ಕಾರ್ಯಪಟುತ್ವಕ್ಕೆ ಸಾಕ್ಷಿಯಾಗಿದೆ.

ಈ ದೀರ್ಘ ಅನುಭವದ ಹಿನ್ನೆಲೆಯಲ್ಲಿಯೇ, ಹೆಣ್ಣುಮಕ್ಕಳ ಸಬಲೀಕರಣ ಮತ್ತು ಲಿಂಗ ಸಮಾನತೆಯ ಅಗತ್ಯವನ್ನು ಮನಗಂಡ ಸ್ಪರ್ಶ ಸಂಸ್ಥೆ, “ಯುವಿಕ ಯೋಜನೆ” ಎಂಬ ಮತ್ತೊಂದು ಮಹತ್ವದ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಯುವಕ ಯೋಜನೆಯು ಕೇವಲ ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೆಳೆದ ಹೆಣ್ಣು ಮಕ್ಕಳಿಗೆ ಮಾತ್ರವಲ್ಲದೆ, ಯಾವುದೇ ಸಮುದಾಯದ ಅನಾಥ ಹಾಗೂ ಏಕಪೋಷಕ ಕುಟುಂಬದ ಹೆಣ್ಣು ಮಕ್ಕಳಿಗೂ ಅನ್ವಯಿಸುತ್ತದೆ.ಉನ್ನತ ವ್ಯಾಸಂಗ ಮುಗಿಸಿದ 21 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ ಈ ಯೋಜನೆ ರೂಪಿಸಲಾಗಿದೆ. ಜೀವನದ ಹೊಸ ಹಂತಕ್ಕೆ ಕಾಲಿಡುವ ಈ ಯುವತಿಯರಿಗೆ ಸರಿಯಾದ ಮಾರ್ಗದರ್ಶನ ಮತ್ತು ಅವಕಾಶಗಳ ಕೊರತೆ ಎದುರಾಗುವ ಸಂದರ್ಭಗಳಲ್ಲಿ, ಯುವಿಕ ಯೋಜನೆ ಅವರುಗಳ ಕನಸುಗಳಿಗೆ ದಿಕ್ಕು ತೋರಿಸುವ ದೀಪಸ್ತಂಭದಂತಾಗಿದೆ.

ಈ ಯೋಜನೆಯು ಕೇವಲ ತರಬೇತಿ ಕಾರ್ಯಕ್ರಮವಲ್ಲ, ಅದು ಒಂದು ಸಮಗ್ರ ರೂಪಾಂತರ ಪ್ರಕ್ರಿಯೆಯಾಗಿದೆ. ಐಎಎಸ್, ಕೆಎಎಸ್ ಮತ್ತು ಸಿಎ ಮುಂತಾದ ಆಡಳಿತಾತ್ಮಕ ಹಾಗೂ ವೃತ್ತಿಪರ ಸೇವೆಗಳಲ್ಲಿ ಉನ್ನತ ಹುದ್ದೆಗಳನ್ನು ಗಳಿಸಲು ಅಗತ್ಯವಾದ ಗುಣಮಟ್ಟದ ತರಬೇತಿ, ನುರಿತ ಉಪನ್ಯಾಸಕರಿಂದ ಮಾರ್ಗದರ್ಶನ, ಉಚಿತ ವಸತಿ ಸೌಲಭ್ಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ, ಯುವತಿಯರಿಗೆ ಸಮಾನ ಅವಕಾಶಗಳನ್ನು ಕಲ್ಪಿಸುತ್ತದೆ. ಈಗಾಗಲೇ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಸರ್ಕಾರಿ ಸೇವೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿಗಳನ್ನೊಳಗೊಂಡ ಸಲಹಾ ಸಮಿತಿ ಈ ಯೋಜನೆಗೆ ದಿಕ್ಕು ತೋರಿಸುತ್ತಿರುವುದು ಇದರ ಮತ್ತೊಂದು ಬಲವಾಗಿದೆ.

ಯುವಿಕಾ ಯೋಜನೆಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಉದ್ಯೋಗಾವಕಾಶಗಳು ಮತ್ತು ಅಸಮಾನತೆ ಕಡಿತಗೊಳಿಸುವ ಗುರಿಗಳನ್ನು
ಒಬ್ಬ ಹೆಣ್ಣುಮಕ್ಕಳಿಗೆ ನೀಡುವ ಶಿಕ್ಷಣವು ಒಂದು ಕುಟುಂಬವನ್ನು ಮಾತ್ರವಲ್ಲ, ಒಂದು ಸಮಾಜವನ್ನೇ ರೂಪಿಸುವ ಶಕ್ತಿ ಹೊಂದಿದೆ ಎಂಬುದು ಎಲ್ಲರೂ ಒಪ್ಪುವ ಸತ್ಯ. ಈ ನಂಬಿಕೆಯನ್ನು ಕಾರ್ಯರೂಪಕ್ಕೆ ತಂದಿರುವ ಸ್ಪರ್ಶ ಸಂಸ್ಥೆಯ ಯುವಿಕ ಯೋಜನೆ, ದುರ್ಬಲ ವರ್ಗದ ಹೆಣ್ಣುಮಕ್ಕಳಿಗೆ ಹೊಸ ಭವಿಷ್ಯದ ಬಾಗಿಲು ತೆರೆಯುತ್ತಿದೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 hour ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago