Categories: ಲೇಖನ

ಅನಾಥ ಪ್ರಜ್ಞೆಯಿಂದ ಹೊರಬಂದು ನೆಮ್ಮದಿಯ ಹುಡುಕಾಟದಲ್ಲಿ….

ವ್ಯವಸ್ಥೆಗಳು,

ನಮಗಾಗಿ, ನಿಮಗಾಗಿ,

ಆದರೂ,…….

ಹೋಮಿಯೋಪತಿ,
ಅಲೋಪತಿ,
ನ್ಯಾಚುರೋಪತಿ,
ಆಯುರ್ವೇದಿಕ್,
ಪ್ರಾಣಿಕ್ ಹೀಲಿಂಗ್,
ಅಕ್ಯುಪಂಕ್ಚರ್,
ಆಕ್ಯುಪ್ರೆಷರ್,
ಮನೆ ಮದ್ದು ……..

ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು.

ಯೋಗ, ಧ್ಯಾನ, ಪ್ರಾಣಾಯಾಮ, ಓಟ, ಜಿಗಿತ, ಕುಣಿತ, ಕರಾಟೆ, ಕುಂಗ್ ಪು, ಕಳರಿಪಯಟ್ಟು, ಕುಸ್ತಿ, ಕುದುರೆ ಸವಾರಿ…….

ಎಲ್ಲವೂ ದೇಹ ಮನಸ್ಸುಗಳ ಆರೋಗ್ಯಕ್ಕಾಗಿ ಮಾಡಿಕೊಂಡಿರುವ ತಯಾರಿಗಳು.

ಓದು, ಬರಹ, ಪ್ರವಾಸ, ನಾಟಕ, ಸಿನಿಮಾ, ಸಂಗೀತ, ಕಲೆ, ನೃತ್ಯ, ಹಾಡು…..

ಎಲ್ಲವೂ ಮನರಂಜನೆ ಮತ್ತು ಪ್ರತಿಭಾ ಪ್ರದರ್ಶನಕ್ಕೆ ಕಂಡುಕೊಂಡಿರುವ ಅಭ್ಯಾಸಗಳು,

ಮದುವೆ, ಕುಟುಂಬ, ಮಕ್ಕಳು, ಅಳಿಯಂದಿರು, ಸೊಸೆಯಂದಿರು…..

ಎಲ್ಲವೂ ನಮ್ಮ ಹಿತಾಸಕ್ತಿಗಾಗಿ ನಿರ್ಮಿಸಿಕೊಂಡ ಸಂಬಂಧಗಳು.

ಪೋಲೀಸು, ಮಿಲಿಟರಿ, ಅರೆ ಸೇನಾಪಡೆ, ಗೃಹ ರಕ್ಷಕ ದಳ, ಗಡಿ ಭದ್ರತಾ ಪಡೆ…..

ಎಲ್ಲವೂ ನಮ್ಮ ರಕ್ಷಣೆಗಾಗಿ ಮಾಡಿಕೊಂಡ ವ್ಯವಸ್ಥೆ.

ಶಿಕ್ಷಣ, ತರಬೇತಿ, ಉದ್ಯೋಗ, ವ್ಯಾಪಾರ, ಉತ್ಪಾದನೆ…..

ಎಲ್ಲವೂ ಬದುಕಲು ಕಟ್ಟಿಕೊಂಡ ವ್ಯವಸ್ಥೆ.

ಕಾನೂನು, ಆಡಳಿತ, ಅಧಿಕಾರಿಗಳು, ಲೆಕ್ಕ ಪರಿಶೋಧಕರು…..

ಎಲ್ಲರೂ ನಮ್ಮ ಹಿತಕ್ಕಾಗಿ ಸಕ್ರಿಯವಾಗಿರುವವರು.

ದೇವರು, ಧರ್ಮ, ದೇವಸ್ಥಾನ, ಪೂಜಾರಿಗಳು,…..

ಎಲ್ಲವೂ ನಮ್ಮ ಮಾನಸಿಕ ನೆಮ್ಮದಿಗಾಗಿ ಸೃಷ್ಟಿಸಿರುವ ವ್ಯವಸ್ಥೆಗಳು.

ಮನೆ, ಹೋಟೆಲ್, ಆಶ್ರಯ, ಛತ್ರ, ಮಠ……..

ಎಲ್ಲವೂ ನಮ್ಮ ಸೌಕರ್ಯಕ್ಕಾಗಿ ನಿರ್ಮಿಸಿರುವ ಕಟ್ಟಡಗಳು.

ಬಾವಿ, ಕೆರೆ, ಸೇತುವೆ, ಕಾಲುವೆ, ಜಲಾಶಯ…

ಎಲ್ಲವನ್ನೂ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಲು ನಿರ್ಮಿಸಿರುವ ವ್ಯವಸ್ಥೆಗಳು.

ಹಣ್ಣು, ತರಕಾರಿ, ಬೇಳೆ,
ಸಿರಿ ಧಾನ್ಯಗಳು…….

ಎಲ್ಲವೂ ‌ಆಹಾರಕ್ಕಾಗಿ ಕಂಡುಹಿಡಿದ ವಸ್ತುಗಳು.

ಮಂಡಲ, ತಾಲ್ಲೂಕು, ಜಿಲ್ಲೆ, ರಾಜ್ಯ, ದೇಶ…….

ಎಲ್ಲಾ ವಿಂಗಡನೆಗಳು ತನ್ನ ಸುಖಕ್ಕಾಗಿ ಮಾಡಿರುವ ವ್ಯವಸ್ಥೆಗಳು.

ಬಸ್ಸು, ಕಾರು, ರೈಲು, ವಿಮಾನ, ರಾಕೆಟ್‌…….

ಎಲ್ಲವನ್ನೂ ತನ್ನ ಪ್ರಯಾಣಕ್ಕಾಗಿ ತಯಾರಿಸಿ ಇಟ್ಟುಕೊಂಡಿರುವ ವ್ಯವಸ್ಥೆಗಳು.

ಅಬ್ಬಾ,
ಅಂಕಿ ಸಂಖ್ಯೆಗಳಿಗೆ ನಿಲುಕಲಾರದಷ್ಟು ಅನುಕೂಲಗಳನ್ನು ಮಾಡಿಕೊಂಡು ಮತ್ತು ಮಾಡಿಕೊಳ್ಳುತ್ತಾ ಬದುಕುತ್ತಿದ್ದಾನೆ.

ಆದರೆ……

ನೆಮ್ಮದಿಯ ಬದುಕು ಅವನದಾಗಿಲ್ಲ. ಸ್ವತಂತ್ರ ಜೀವನ ನಡೆಸಲಾಗುತ್ತಿಲ್ಲ.

ಆಸ್ಪತ್ರೆಗಳು, ಪೋಲೀಸ್ ಸ್ಟೇಷನ್ ಗಳು, ನ್ಯಾಯಾಲಯಗಳು, ಸಿಸಿ ಟಿವಿಗಳು ಹೆಚ್ಚುತ್ತಲೇ ಇವೆ.

ಶುದ್ದ ಗಾಳಿ, ಶುದ್ದ ನೀರು, ಶುದ್ದ ಆಹಾರ ಸಿಗುತ್ತಿಲ್ಲ.

ಕಣ್ತುಂಬ ನಿದ್ದೆಗಾಗಿ ಪರದಾಡುವಂತಾಗಿದೆ.

ದೇವಸ್ಥಾಗಳ ಮುಂದೆ ಚಪ್ಪಲಿ ಬಿಟ್ಟು ನೆಮ್ಮದಿಯಿಂದ ಒಳಗೆ ಕೈಮುಗಿಯಲು ಕಷ್ಟವಾಗುತ್ತಿದೆ. ಏಕೆಂದರೆ ಹೊರಗೆ ಬರುವಷ್ಟರಲ್ಲಿ ಚಪ್ಪಲಿ ಮಾಯ. ತಾರಸಿ ಮೇಲಿನ ಬಟ್ಟೆಗಳನ್ನು ಕದಿಯಲಾಗುತ್ತಿದೆ.

ಬಸ್ಸು ರೈಲು ನಿಲ್ದಾಣಗಳಲ್ಲಿ ಕಳ್ಳರಿದ್ದಾರೆ ಎಂಬ ಎಚ್ಚರಿಕೆಯ ಬೋರ್ಡುಗಳು.

ಒಂದು ಸೈಟು, ಮನೆ ಕೊಳ್ಳಲು ಹಲವಾರು ವಂಚನೆಯ ಅನುಮಾನಗಳು.

ಒಂದು ಸಣ್ಣ ಕೆಲಸಕ್ಕೆ ಲಂಚ ನೀಡಬೇಕಾದ ಅನಿವಾರ್ಯತೆ.

ಮದುವೆಗಾಗಿ ವಧು ವರರನ್ನು ಹುಡುಕುವುದೇ ಒಂದು ದೊಡ್ಡ ಸಾಹಸ.

ರಾತ್ರಿ ಹೊತ್ತು ನೆಮ್ಮದಿಯಾಗಿ ಒಂಟಿಯಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ.

ಟಿವಿ ಇಂಟರ್ನೆಟ್ ಎಲ್ಲಾ ‌ಬೆರಳ ತುದಿಯಲ್ಲಿ ಇದ್ದರೂ ಯಾವ ಮಾಹಿತಿ ನಿಜ, ಯಾವುದು ಸುಳ್ಳು ಎಂಬ ಗೊಂದಲ ಎಲ್ಲರಲ್ಲೂ ಇರುತ್ತದೆ.

ಪ್ರತಿ ಕ್ಷಣವೂ ಆತಂಕದಲ್ಲೇ ಬದುಕಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ.

ಎಲ್ಲಾ ಅನುಕೂಲಗಳೂ ಅನಾನುಕೂಲಗಳಾಗಿರುವ ಪರಿಸ್ಥಿತಿಯಲ್ಲಿ ನಾವು ನೀವು.

ಸರಳತೆಯಿಂದ ಸಂಕೀರ್ಣ ಬದುಕಿನತ್ತ ಸಾಗಿದ ನಾವು ಈಗ ಮತ್ತೆ ಸಂಕೀರ್ಣತೆಯಿಂದ ಸರಳತೆಯತ್ತ ಸಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಎಲ್ಲವೂ ಇದ್ದು ಏನೂ ಇಲ್ಲದ ಅನಾಥ ಪ್ರಜ್ಞೆಯಿಂದ ಹೊರಬಂದು ನೆಮ್ಮದಿಯ ಹುಡುಕಾಟದಲ್ಲಿ ನಮ್ಮ ಸಮಾಜ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

7 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

8 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

9 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

9 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

13 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

20 hours ago