Categories: ಲೇಖನ

ಅನಾಥ ಪ್ರಜ್ಞೆಯಿಂದ ಹೊರಬಂದು ನೆಮ್ಮದಿಯ ಹುಡುಕಾಟದಲ್ಲಿ….

ವ್ಯವಸ್ಥೆಗಳು,

ನಮಗಾಗಿ, ನಿಮಗಾಗಿ,

ಆದರೂ,…….

ಹೋಮಿಯೋಪತಿ,
ಅಲೋಪತಿ,
ನ್ಯಾಚುರೋಪತಿ,
ಆಯುರ್ವೇದಿಕ್,
ಪ್ರಾಣಿಕ್ ಹೀಲಿಂಗ್,
ಅಕ್ಯುಪಂಕ್ಚರ್,
ಆಕ್ಯುಪ್ರೆಷರ್,
ಮನೆ ಮದ್ದು ……..

ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು.

ಯೋಗ, ಧ್ಯಾನ, ಪ್ರಾಣಾಯಾಮ, ಓಟ, ಜಿಗಿತ, ಕುಣಿತ, ಕರಾಟೆ, ಕುಂಗ್ ಪು, ಕಳರಿಪಯಟ್ಟು, ಕುಸ್ತಿ, ಕುದುರೆ ಸವಾರಿ…….

ಎಲ್ಲವೂ ದೇಹ ಮನಸ್ಸುಗಳ ಆರೋಗ್ಯಕ್ಕಾಗಿ ಮಾಡಿಕೊಂಡಿರುವ ತಯಾರಿಗಳು.

ಓದು, ಬರಹ, ಪ್ರವಾಸ, ನಾಟಕ, ಸಿನಿಮಾ, ಸಂಗೀತ, ಕಲೆ, ನೃತ್ಯ, ಹಾಡು…..

ಎಲ್ಲವೂ ಮನರಂಜನೆ ಮತ್ತು ಪ್ರತಿಭಾ ಪ್ರದರ್ಶನಕ್ಕೆ ಕಂಡುಕೊಂಡಿರುವ ಅಭ್ಯಾಸಗಳು,

ಮದುವೆ, ಕುಟುಂಬ, ಮಕ್ಕಳು, ಅಳಿಯಂದಿರು, ಸೊಸೆಯಂದಿರು…..

ಎಲ್ಲವೂ ನಮ್ಮ ಹಿತಾಸಕ್ತಿಗಾಗಿ ನಿರ್ಮಿಸಿಕೊಂಡ ಸಂಬಂಧಗಳು.

ಪೋಲೀಸು, ಮಿಲಿಟರಿ, ಅರೆ ಸೇನಾಪಡೆ, ಗೃಹ ರಕ್ಷಕ ದಳ, ಗಡಿ ಭದ್ರತಾ ಪಡೆ…..

ಎಲ್ಲವೂ ನಮ್ಮ ರಕ್ಷಣೆಗಾಗಿ ಮಾಡಿಕೊಂಡ ವ್ಯವಸ್ಥೆ.

ಶಿಕ್ಷಣ, ತರಬೇತಿ, ಉದ್ಯೋಗ, ವ್ಯಾಪಾರ, ಉತ್ಪಾದನೆ…..

ಎಲ್ಲವೂ ಬದುಕಲು ಕಟ್ಟಿಕೊಂಡ ವ್ಯವಸ್ಥೆ.

ಕಾನೂನು, ಆಡಳಿತ, ಅಧಿಕಾರಿಗಳು, ಲೆಕ್ಕ ಪರಿಶೋಧಕರು…..

ಎಲ್ಲರೂ ನಮ್ಮ ಹಿತಕ್ಕಾಗಿ ಸಕ್ರಿಯವಾಗಿರುವವರು.

ದೇವರು, ಧರ್ಮ, ದೇವಸ್ಥಾನ, ಪೂಜಾರಿಗಳು,…..

ಎಲ್ಲವೂ ನಮ್ಮ ಮಾನಸಿಕ ನೆಮ್ಮದಿಗಾಗಿ ಸೃಷ್ಟಿಸಿರುವ ವ್ಯವಸ್ಥೆಗಳು.

ಮನೆ, ಹೋಟೆಲ್, ಆಶ್ರಯ, ಛತ್ರ, ಮಠ……..

ಎಲ್ಲವೂ ನಮ್ಮ ಸೌಕರ್ಯಕ್ಕಾಗಿ ನಿರ್ಮಿಸಿರುವ ಕಟ್ಟಡಗಳು.

ಬಾವಿ, ಕೆರೆ, ಸೇತುವೆ, ಕಾಲುವೆ, ಜಲಾಶಯ…

ಎಲ್ಲವನ್ನೂ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಲು ನಿರ್ಮಿಸಿರುವ ವ್ಯವಸ್ಥೆಗಳು.

ಹಣ್ಣು, ತರಕಾರಿ, ಬೇಳೆ,
ಸಿರಿ ಧಾನ್ಯಗಳು…….

ಎಲ್ಲವೂ ‌ಆಹಾರಕ್ಕಾಗಿ ಕಂಡುಹಿಡಿದ ವಸ್ತುಗಳು.

ಮಂಡಲ, ತಾಲ್ಲೂಕು, ಜಿಲ್ಲೆ, ರಾಜ್ಯ, ದೇಶ…….

ಎಲ್ಲಾ ವಿಂಗಡನೆಗಳು ತನ್ನ ಸುಖಕ್ಕಾಗಿ ಮಾಡಿರುವ ವ್ಯವಸ್ಥೆಗಳು.

ಬಸ್ಸು, ಕಾರು, ರೈಲು, ವಿಮಾನ, ರಾಕೆಟ್‌…….

ಎಲ್ಲವನ್ನೂ ತನ್ನ ಪ್ರಯಾಣಕ್ಕಾಗಿ ತಯಾರಿಸಿ ಇಟ್ಟುಕೊಂಡಿರುವ ವ್ಯವಸ್ಥೆಗಳು.

ಅಬ್ಬಾ,
ಅಂಕಿ ಸಂಖ್ಯೆಗಳಿಗೆ ನಿಲುಕಲಾರದಷ್ಟು ಅನುಕೂಲಗಳನ್ನು ಮಾಡಿಕೊಂಡು ಮತ್ತು ಮಾಡಿಕೊಳ್ಳುತ್ತಾ ಬದುಕುತ್ತಿದ್ದಾನೆ.

ಆದರೆ……

ನೆಮ್ಮದಿಯ ಬದುಕು ಅವನದಾಗಿಲ್ಲ. ಸ್ವತಂತ್ರ ಜೀವನ ನಡೆಸಲಾಗುತ್ತಿಲ್ಲ.

ಆಸ್ಪತ್ರೆಗಳು, ಪೋಲೀಸ್ ಸ್ಟೇಷನ್ ಗಳು, ನ್ಯಾಯಾಲಯಗಳು, ಸಿಸಿ ಟಿವಿಗಳು ಹೆಚ್ಚುತ್ತಲೇ ಇವೆ.

ಶುದ್ದ ಗಾಳಿ, ಶುದ್ದ ನೀರು, ಶುದ್ದ ಆಹಾರ ಸಿಗುತ್ತಿಲ್ಲ.

ಕಣ್ತುಂಬ ನಿದ್ದೆಗಾಗಿ ಪರದಾಡುವಂತಾಗಿದೆ.

ದೇವಸ್ಥಾಗಳ ಮುಂದೆ ಚಪ್ಪಲಿ ಬಿಟ್ಟು ನೆಮ್ಮದಿಯಿಂದ ಒಳಗೆ ಕೈಮುಗಿಯಲು ಕಷ್ಟವಾಗುತ್ತಿದೆ. ಏಕೆಂದರೆ ಹೊರಗೆ ಬರುವಷ್ಟರಲ್ಲಿ ಚಪ್ಪಲಿ ಮಾಯ. ತಾರಸಿ ಮೇಲಿನ ಬಟ್ಟೆಗಳನ್ನು ಕದಿಯಲಾಗುತ್ತಿದೆ.

ಬಸ್ಸು ರೈಲು ನಿಲ್ದಾಣಗಳಲ್ಲಿ ಕಳ್ಳರಿದ್ದಾರೆ ಎಂಬ ಎಚ್ಚರಿಕೆಯ ಬೋರ್ಡುಗಳು.

ಒಂದು ಸೈಟು, ಮನೆ ಕೊಳ್ಳಲು ಹಲವಾರು ವಂಚನೆಯ ಅನುಮಾನಗಳು.

ಒಂದು ಸಣ್ಣ ಕೆಲಸಕ್ಕೆ ಲಂಚ ನೀಡಬೇಕಾದ ಅನಿವಾರ್ಯತೆ.

ಮದುವೆಗಾಗಿ ವಧು ವರರನ್ನು ಹುಡುಕುವುದೇ ಒಂದು ದೊಡ್ಡ ಸಾಹಸ.

ರಾತ್ರಿ ಹೊತ್ತು ನೆಮ್ಮದಿಯಾಗಿ ಒಂಟಿಯಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ.

ಟಿವಿ ಇಂಟರ್ನೆಟ್ ಎಲ್ಲಾ ‌ಬೆರಳ ತುದಿಯಲ್ಲಿ ಇದ್ದರೂ ಯಾವ ಮಾಹಿತಿ ನಿಜ, ಯಾವುದು ಸುಳ್ಳು ಎಂಬ ಗೊಂದಲ ಎಲ್ಲರಲ್ಲೂ ಇರುತ್ತದೆ.

ಪ್ರತಿ ಕ್ಷಣವೂ ಆತಂಕದಲ್ಲೇ ಬದುಕಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ.

ಎಲ್ಲಾ ಅನುಕೂಲಗಳೂ ಅನಾನುಕೂಲಗಳಾಗಿರುವ ಪರಿಸ್ಥಿತಿಯಲ್ಲಿ ನಾವು ನೀವು.

ಸರಳತೆಯಿಂದ ಸಂಕೀರ್ಣ ಬದುಕಿನತ್ತ ಸಾಗಿದ ನಾವು ಈಗ ಮತ್ತೆ ಸಂಕೀರ್ಣತೆಯಿಂದ ಸರಳತೆಯತ್ತ ಸಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಎಲ್ಲವೂ ಇದ್ದು ಏನೂ ಇಲ್ಲದ ಅನಾಥ ಪ್ರಜ್ಞೆಯಿಂದ ಹೊರಬಂದು ನೆಮ್ಮದಿಯ ಹುಡುಕಾಟದಲ್ಲಿ ನಮ್ಮ ಸಮಾಜ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

5 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

6 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

11 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

13 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

16 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago