Categories: ಲೇಖನ

ಅನಾಥ ಮಕ್ಕಳು…… ಇವರ ಬಗ್ಗೆ ಇರಲಿ ಕಾಳಜಿ…

ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು…..

ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು.

ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ ಸಂಸ್ಕೃತಿಯ ಬಗ್ಗೆ ಒಂದಷ್ಟು ತಿರಸ್ಕಾರ ಮನೋಭಾವದ ವ್ಯಕ್ತಿ ಅವರು.

ಆ ಹೊತ್ತಿನಲ್ಲಿ ನಮ್ಮ ಮುಂದೆ ಇದ್ದ ಪತ್ರಿಕೆಯೊಂದರಲ್ಲಿ ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಒಂದು ವರದಿ ಇತ್ತು. ಅದರ ಬಗ್ಗೆ ತುಂಬಾ ವಿಷಾದ ವ್ಯಕ್ತಪಡಿಸಿ ಮಾತು ಆರಂಭವಾಗುತ್ತಿದ್ದಂತೆ ಅವರು ಒಂದು ಮಾತು ಹೇಳಿದರು….

ಅಮೆರಿಕಾದಲ್ಲಿ ಮಗುವೊಂದು ಅನಾಥವಾಗುವುದು ವೈಯಕ್ತಿಕವಾಗಿ ತುಂಬಾ ನೋವಿನ ವಿಷಯವಾದರು ಸಾಮಾಜಿಕವಾಗಿ ಆ ಮಗುವನ್ನು ಅದೃಷ್ಟಶಾಲಿ ಎಂದು ಪರಿಗಣಿಸಬಹುದು ಎಂದರು.

ಕುತೂಹಲದಿಂದ ಅದು ಹೇಗೆ ಎಂದು ಕೇಳಿದೆ…….

ಅವರ ವಿವರಣೆ……

ಒಂದು ವೇಳೆ ಒಂದು ಮಗು ಯಾವುದೇ ಕಾರಣದಿಂದ ತಂದೆ, ತಾಯಿ ಅಥವಾ ಪೋಷಕರನ್ನು ಕಳೆದುಕೊಂಡು ಅನಾಥವಾದರೆ ಇಡೀ ಅಮೆರಿಕಾದ ಸಮಾಜ ಮತ್ತು ಸರ್ಕಾರದ ಆಡಳಿತಾತ್ಮಕ ವ್ಯವಸ್ಥೆ ಆ ಮಗುವಿಗೆ ಅನಾಥ ಪ್ರಜ್ಞೆ ಕಾಡದಂತೆ ಮಗುವನ್ನು ಬೆಳೆಸುವ ನೈತಿಕ ಜವಾಬ್ದಾರಿ ಹೊರುತ್ತದೆ. ಅನಾಥ ಮಗುವಿಗೆ ಎಲ್ಲಾ ರೀತಿಯ ಗುಣಮಟ್ಟದ ಸೌಕರ್ಯಗಳನ್ನು ಕೊಡುವುದಲ್ಲದೆ ಅದಕ್ಕೆ ವಿಶೇಷ ಗೌರವ ಆತಿಥ್ಯ ನೀಡಲಾಗುತ್ತದೆ. ವಿಷಯ ತಿಳಿದಿರುವ ಪ್ರತಿಯೊಬ್ಬರು ತಮ್ಮ ಕರ್ತವ್ಯ ಎಂಬಂತೆ ಅನುಕಂಪಕ್ಕೆ ಬದಲಾಗಿ ಆತ್ಮೀಯತೆ ತೋರುತ್ತಾರೆ. ಮಗುವಿಗೆ ಯಾವುದೇ ಕೊರತೆ ಕಾಡದಂತೆ ಉತ್ತಮ ಪ್ರಜೆಯಾಗಿ ಬೆಳೆಯಲು ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಾರೆ. ಇದೇ ಅಲ್ಲವೇ ಮಾನವೀಯ ಮೌಲ್ಯಗಳ ನಿಜವಾದ ಸಮಾಜ….

ಭಾರತದಲ್ಲಿ ಈ ರೀತಿಯ ಒಂದು ಮಗು ಅನಾಥವಾದರೆ ಏನಾಗಬಹುದು ಎಂಬುದನ್ನು ದಯವಿಟ್ಟು ಮುಕ್ತ ಮನಸ್ಸಿನಿಂದ ನಿಮ್ಮ ಅನುಭವದ ಆಧಾರದ ಮೇಲೆ ಊಹಿಸಿ.

ನನ್ನ ಅನುಭವದ ಪ್ರಕಾರ,

ಆ ಮಗುವನ್ನು ಅತ್ಯಂತ ಹೀನಾಯವಾಗಿ ಸಂಬಂಧಿಕರು, ಪರಿಚಿತರು, ಅಧಿಕಾರಿಗಳು ನಡೆಸಿಕೊಳ್ಳುತ್ತಾರೆ. ಅದಕ್ಕೆ ಯಾರೂ ದಿಕ್ಕು ದೆಸೆ ಇಲ್ಲ ಎಂದು ತಿಳಿದರೆ ಆ ಮಗುವಿನ ಬಳಿ ಸಿಗರೇಟು, ಮದ್ಯಪಾನ ತರಿಸಿಕೊಳ್ಳುವುದು, ಕೆಲವು ಸಣ್ಣ ಪುಟ್ಟ ಅಪರಾಧ ಮಾಡಿಸುವುದು, ಲೈಂಗಿಕ ದುರುಪಯೋಗ, ಸ್ವಲ್ಪ ಹಣ ನೀಡಿ ಏನೋ ಮಹಾ ಉಪಕಾರ ಮಾಡಿದಂತೆ ಮಾತನಾಡುವುದು ಹೀಗೆ ಅದನ್ನು ತುಂಬಾ ಕೀಳಾಗಿ ಕಾಣುತ್ತಾರೆ. ಸರ್ಕಾರಿ ವ್ಯವಸ್ಥೆಯ ಬಗ್ಗೆ ಹೆಚ್ಚು ಹೇಳುವುದು ಬೇಡ. ಎಲ್ಲಾ ಇರುವವರಿಗೇ ಸಿಕ್ಕಾಪಟ್ಟೆ ತೊಂದರೆ ಕೊಡುವಾಗ, ಇನ್ನು ಅನಾಥ ಮಗುವಿಗೆ ದಿಕ್ಕು ತೋರುವುದು ಯಾರು…..

ಕೊನೆಗೆ ಇದು ಆ ಮಗುವಿನ ಕರ್ಮ ಎಂದು ಕರೆದು ಪಲಾಯನ ಸಿದ್ದಾಂತದ ಮೊರೆ ಹೋಗುವವರು ಹಲವರು.

ಇಲ್ಲಿ ಇದನ್ನು ಪ್ರಸ್ತಾಪಿಸಲು ಕಾರಣ, ಪಾಶ್ಚಾತ್ಯ ಸಂಸ್ಕೃತಿಯ ಅಮೆರಿಕ ದೇಶದ ಸಮಾಜ ಅನಾಥ ಮಗುವನ್ನು ಬೆಳೆಸುವ ಪರಿ, ಹಾಗೆಯೇ ಆಧ್ಯಾತ್ಮದ ತವರೂರು, ಧಾರ್ಮಿಕ ನಿಷ್ಠೆ, ಮಾನವೀಯ ಮೌಲ್ಯಗಳ ವಕ್ತಾರರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಭಾರತೀಯ ಸಮಾಜದಲ್ಲಿ ಅನಾಥ ಮಗುವನ್ನು ಬೆಳೆಸುವ ರೀತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳೋಣ ಎಂದು.

ಅನಾಥ ಮಕ್ಕಳನ್ನು ಭಿಕ್ಷೆಗೆ ತಳ್ಳುವ, ಮಾರಿಕೊಳ್ಳುವ, ಅಪರಾಧಿಗಳನ್ನಾಗಿ ಮಾಡುವ, ದುಶ್ಚಟಗಳಿಗೆ ಉಪಯೋಗಿಸಿಕೊಳ್ಳುವ ಸಮಾಜ ನಮ್ಮದಾಗುವುದು ಬೇಡ. ಪ್ರಾಕೃತಿಕ ವಿಕೋಪಗಳು, ಕೊರೋನಾ ಮುಂತಾದ ಸಾಂಕ್ರಾಮಿಕ ರೋಗಗಳು, ಅಪಘಾತಗಳು ಇತ್ಯಾದಿ ಕಾರಣದಿಂದ ಬೃಹತ್ ಜನಸಂಖ್ಯೆಯ ಭಾರತದಲ್ಲಿ ಇತ್ತೀಚಿಗೆ ಅನಾಥರಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ.

ಇನ್ನು ಮುಂದೆ ಅಂತಹ ಮಕ್ಕಳಿಗೆ ಸಾಧ್ಯವಾದಷ್ಟು ಉತ್ತಮ ಬದುಕನ್ನು ರೂಪಿಸುವ ಕನಿಷ್ಠ ಜವಾಬ್ದಾರಿ ಸಮಾಜ ಮತ್ತು ಸರ್ಕಾರ ತೆಗೆದುಕೊಳ್ಳುಬೇಕಿದೆ. ಅದಕ್ಕೆ ಬೇಕಾದ ಕಾನೂನು ಇದೆ. ಆದರೆ ಅನುಷ್ಠಾನ ಮಾತ್ರ ಭ್ರಷ್ಟಗೊಂಡಿದೆ.

ನಾವುಗಳು ವೈಯಕ್ತಿಕ ನೆಲೆಯಲ್ಲಿ ನಮ್ಮ ಸುತ್ತಮುತ್ತಲಿನ ಈ ರೀತಿಯ ಮಕ್ಕಳ ಬಗ್ಗೆ ಇನ್ನು ಮುಂದೆ ಸ್ವಲ್ಪ ಹೆಚ್ಚಿನ ಕಾಳಜಿ ಮತ್ತು ಆಸಕ್ತಿ ವಹಿಸೋಣ. ಅನಾಥ ಮಗುವಿಗೆ ಅನಾಥ ಪ್ರಜ್ಞೆ ಕಾಡದಂತೆ ಕನಿಷ್ಠ ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಒಂದು ಸಣ್ಣ ಜವಾಬ್ದಾರಿ ನಿರ್ವಹಿಸೋಣ………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

6 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

12 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

13 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago