ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್: ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ತಾಲೂಕಿನ ರೈತರು ಬುಧವಾರ ನಗರದ ಟಿ.ಬಿ.ವೃತ್ತದಲ್ಲಿರುವ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ‌ ನಡೆಸಿದರು.

ಟ್ರ್ಯಾಕ್ಟರ್ ಗಳ ಮೂಲಕ ಬಂದ ರೈತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸುವಂತೆ ಆಗ್ರಹಿಸಿದರು.

ರೈತರಿಗೆ ಈ ಹಿಂದೆ ನೀಡುತ್ತಿದ್ದ ರೀತಿಯಲ್ಲೇ ನಿರಂತರ ಏಳು ತಾಸು ವಿದ್ಯುತ್ ಪೂರೈಸಬೇಕು. ಮೂರು ಪಾಳಿಯಲ್ಲಿ ರಾತ್ರಿ ಪಾಳಿ ಕೈಬಿಡಬೇಕು. ಹಗಲಲ್ಲಿ ಒಟ್ಟು 5 ತಾಸು ವಿದ್ಯುತ್ ನೀಡಬೇಕು. ವಿದ್ಯುತ್ ಅಭಾವದಿಂದ ರೈತರು ಬೆಳೆಗಳನ್ನು ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಬೆಸ್ಕಾಂ ಅಧಿಕಾರಿಗಳು ಕಾರ್ಖಾನೆಗಳಿಗೆ ನಿರಂತರ ವಿದ್ಯುತ್ ಪೂರೈಸಿ ರೈತರಿಗೆ ಲೋಡ್ ಶೆಡ್ಡಿಂಗ್ ಹೆಸರಲ್ಲಿ ಅನ್ಯಾಯ‌ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ಐದು ತಾಸು ವಿದ್ಯುತ್ ಪೂರೈಸಲು ಒಪ್ಪಿಗೆ ನೀಡಿದೆ. ಆದರೆ, ಅದನ್ನು ಹಗಲು ಹೊತ್ತಿನಲ್ಲೇ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ  ಮಾತನಾಡಿದ ಬೆಸ್ಕಾಂ ಎಸ್ ಇ ಪಾಲನೇತ್ರ ಅವರು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಬೇರೆ ರಾಜ್ಯಗಳಿಗೆ ಸರಬರಾಜು ಮಾಡುತ್ತಿದ್ದ ವಿದ್ಯುತ್ತನ್ನೂ ನಿಲ್ಲಿಸಲಾಗಿದೆ. ಸೌರ ವಿದ್ಯುತ್ ಮೂಲಕವೇ  ಬ್ಯಾಲೆನ್ಸ್ ಮಾಡಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ‌ ಈ ಬಾರಿ 2000 ಕೋಟಿ ವಿದ್ಯುತ್ ಖರೀದಿ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಉತ್ಪಾದನೆ ಅನುಸಾರ ಐದು ತಾಸು ನೀಡಲಾಗುವುದು. ಆದರೆ, ಏಳು ತಾಸು ನಿರಂತರವಾಗಿ ಕೊಡಲಾಗದು.‌ ಮುಂದಿನ ಪರಿಸ್ಥಿತಿ ನೋಡಿಕೊಂಡು ಸಮರ್ಪಕ ವಿದ್ಯುತ್ ಪೂರೈಸಲಾಗುವುದು ಎಂದು ಹೇಳಿದರು.

ಬೆಸ್ಕಾಂ ಅಧಿಕಾರಿಯ ಹೇಳಿಕೆಗೆ ರೈತರು ಒಪ್ಪಿಗೆ ಸೂಚಿಸದ ಕಾರಣ , ಈ ತಿಂಗಳ 31 ರಂದು ಸರ್ಕಾರದೊಂದಿಗೆ‌ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅ.31ರೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಜನ-ಜಾನುವಾರುಗಳೊಂದಿಗೆ ಬಂದು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ‌ ಸಂಘದ ಜಿಲ್ಲಾಧ್ಯಕ್ಷ  ಪ್ರಸನ್ನ, ಮುಖಂಡರಾದ ಸತೀಶ್, ವಸಂತ್, ವಾಸುದೇವ್, ಅಂತರಹಳ್ಳಿ ನರಸಿಂಹರಾಜು, ಗಂಗಸಂದ್ರ ರಾಜಣ್ಣ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

7 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago