ಬೆಂಗಳೂರು ವೈಟ್ ಫೀಲ್ದ್ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ 45 ವರ್ಷದ ಬಾಬು ಎಂಬ ರೋಗಿಗೆ, ಪಿತ್ತಕೋಶದ ಕ್ಯಾನ್ಸರ್ ಇರುವುದು ಸ್ಕ್ಯಾನ್ನಲ್ಲಿ ತೋರಿಸಲಿಲ್ಲವಾದರೂ, ಮೆಡಿಕವರ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರು ತಮ್ಮ ವೈದ್ಯಕೀಯ ಅನುಭವದಿಂದಲೇ ಗಂಭೀರತೆಯನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ ಪರಿಣಾಮ, ರೋಗಿಯು ಜೀವಾಪಾಯದಿಂದ ಪಾರಾದ್ದಾರೆ.
ಬಾಬು ಅವರು 30 ದಿನಗಳ ಕಾಲ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅದನ್ನು ಸಾಮಾನ್ಯ ಗ್ರಾಸ್ಟ್ರಿಕ್ ಸಮಸ್ಯೆ ಎಂದು ಅನಿಸಿಕೊಂಡಿದ್ದರು. ಅವರು ಚಿಕಿತ್ಸೆಗಾಗಿ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಕೌಶಿಕ್ ಅವರ ಸಲಹೆ ಪಡೆದುಕೊಂಡರು. ಡಾಕ್ಟರ್ ಅವರು ತಕ್ಷಣವೇ ಇತರೆ ಪರೀಕ್ಷೆಗಳನ್ನು ಮಾಡಿಸಿ, ಪಿತ್ತಕೋಶದ ಕ್ಯಾನ್ಸರ್ ಆಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದರು.
ಆದರೆ ಪ್ರಾಥಮಿಕ ಸ್ಕ್ಯಾನ್ ವರದಿಯಲ್ಲಿ ಕ್ಯಾನ್ಸರ್ ಇಲ್ಲವೆನ್ನಲಾಗಿತ್ತು. ನಂತರ ಬಯೋಪ್ಸಿ ನಡೆಸಿದಾಗ ಪಿತ್ತಕೋಶದಲ್ಲಿ ಕ್ಯಾನ್ಸರ್ ಇರುವುದಾಗಿ ದೃಢಪಟ್ಟಿತು. ತಕ್ಷಣವೇ ರೊಬೋಟಿಕ್ ಶಸ್ತ್ರಚಿಕಿತ್ಸೆಯ ಮೂಲಕ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ (ಪಿತ್ತಕೋಶವನ್ನು ಸಂಪೂರ್ಣವಾಗಿ ತೆಗೆದುಹಾಕುವುದು) ಮಾಡಲಾಯಿತು. ಕ್ಯಾನ್ಸರ್ ಸ್ವಲ್ಪ ಲಿವರ್ಗೂ ಹಬ್ಬಿಕೊಂಡಿದ್ದರಿಂದ, ಲಿವರ್ನ ಒಂದು ಭಾಗವನ್ನೂ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು.
ಡಾ. ಕೌಶಿಕ್ ಸುಬ್ರಮಣಿಯನ್ ಅವರು, ಪಿತ್ತಕೋಶ ಸಂಬಂಧಿತ ಕಾಯಿಲೆಗಳಲ್ಲಿ ತಕ್ಷಣದ ತಪಾಸಣೆ ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದು ಅತ್ಯಂತ ಅವಶ್ಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…