Categories: ಆರೋಗ್ಯ

ಅನುಭವದ ಮೇರೆಗೆ ಕ್ಯಾನ್ಸರ್ ಪತ್ತೆ: ರೋಗಿಯ ಜೀವ ರಕ್ಷಿಸಿದ ಡಾ.ಕೌಶಿಕ್‌ ಸುಬ್ರಮಣಿಯನ್

ಬೆಂಗಳೂರು ವೈಟ್‌ ಫೀಲ್ದ್‌ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ 45 ವರ್ಷದ ಬಾಬು ಎಂಬ ರೋಗಿಗೆ, ಪಿತ್ತಕೋಶದ ಕ್ಯಾನ್ಸರ್ ಇರುವುದು ಸ್ಕ್ಯಾನ್‌ನಲ್ಲಿ ತೋರಿಸಲಿಲ್ಲವಾದರೂ, ಮೆಡಿಕವರ್‌ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರು ತಮ್ಮ ವೈದ್ಯಕೀಯ ಅನುಭವದಿಂದಲೇ ಗಂಭೀರತೆಯನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ ಪರಿಣಾಮ, ರೋಗಿಯು ಜೀವಾಪಾಯದಿಂದ ಪಾರಾದ್ದಾರೆ.

ಬಾಬು ಅವರು 30 ದಿನಗಳ ಕಾಲ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅದನ್ನು ಸಾಮಾನ್ಯ ಗ್ರಾಸ್ಟ್ರಿಕ್ ಸಮಸ್ಯೆ ಎಂದು ಅನಿಸಿಕೊಂಡಿದ್ದರು. ಅವರು ಚಿಕಿತ್ಸೆಗಾಗಿ ಮೆಡಿಕವರ್‌ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಕೌಶಿಕ್ ಅವರ ಸಲಹೆ ಪಡೆದುಕೊಂಡರು. ಡಾಕ್ಟರ್‌ ಅವರು ತಕ್ಷಣವೇ ಇತರೆ ಪರೀಕ್ಷೆಗಳನ್ನು ಮಾಡಿಸಿ, ಪಿತ್ತಕೋಶದ ಕ್ಯಾನ್ಸರ್ ಆಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದರು.
ಆದರೆ ಪ್ರಾಥಮಿಕ ಸ್ಕ್ಯಾನ್ ವರದಿಯಲ್ಲಿ ಕ್ಯಾನ್ಸರ್ ಇಲ್ಲವೆನ್ನಲಾಗಿತ್ತು. ನಂತರ ಬಯೋಪ್ಸಿ ನಡೆಸಿದಾಗ ಪಿತ್ತಕೋಶದಲ್ಲಿ ಕ್ಯಾನ್ಸರ್ ಇರುವುದಾಗಿ ದೃಢಪಟ್ಟಿತು. ತಕ್ಷಣವೇ ರೊಬೋಟಿಕ್ ಶಸ್ತ್ರಚಿಕಿತ್ಸೆಯ ಮೂಲಕ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ (ಪಿತ್ತಕೋಶವನ್ನು ಸಂಪೂರ್ಣವಾಗಿ ತೆಗೆದುಹಾಕುವುದು) ಮಾಡಲಾಯಿತು. ಕ್ಯಾನ್ಸರ್ ಸ್ವಲ್ಪ ಲಿವರ್‌ಗೂ ಹಬ್ಬಿಕೊಂಡಿದ್ದರಿಂದ, ಲಿವರ್‌ನ ಒಂದು ಭಾಗವನ್ನೂ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು.

ಡಾ. ಕೌಶಿಕ್ ಸುಬ್ರಮಣಿಯನ್ ಅವರು, ಪಿತ್ತಕೋಶ ಸಂಬಂಧಿತ ಕಾಯಿಲೆಗಳಲ್ಲಿ ತಕ್ಷಣದ ತಪಾಸಣೆ ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದು ಅತ್ಯಂತ ಅವಶ್ಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 hour ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

4 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

6 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

8 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

8 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago