ಬೆಂಗಳೂರು ವೈಟ್ ಫೀಲ್ದ್ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ 45 ವರ್ಷದ ಬಾಬು ಎಂಬ ರೋಗಿಗೆ, ಪಿತ್ತಕೋಶದ ಕ್ಯಾನ್ಸರ್ ಇರುವುದು ಸ್ಕ್ಯಾನ್ನಲ್ಲಿ ತೋರಿಸಲಿಲ್ಲವಾದರೂ, ಮೆಡಿಕವರ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರು ತಮ್ಮ ವೈದ್ಯಕೀಯ ಅನುಭವದಿಂದಲೇ ಗಂಭೀರತೆಯನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ ಪರಿಣಾಮ, ರೋಗಿಯು ಜೀವಾಪಾಯದಿಂದ ಪಾರಾದ್ದಾರೆ.
ಬಾಬು ಅವರು 30 ದಿನಗಳ ಕಾಲ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅದನ್ನು ಸಾಮಾನ್ಯ ಗ್ರಾಸ್ಟ್ರಿಕ್ ಸಮಸ್ಯೆ ಎಂದು ಅನಿಸಿಕೊಂಡಿದ್ದರು. ಅವರು ಚಿಕಿತ್ಸೆಗಾಗಿ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಕೌಶಿಕ್ ಅವರ ಸಲಹೆ ಪಡೆದುಕೊಂಡರು. ಡಾಕ್ಟರ್ ಅವರು ತಕ್ಷಣವೇ ಇತರೆ ಪರೀಕ್ಷೆಗಳನ್ನು ಮಾಡಿಸಿ, ಪಿತ್ತಕೋಶದ ಕ್ಯಾನ್ಸರ್ ಆಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದರು.
ಆದರೆ ಪ್ರಾಥಮಿಕ ಸ್ಕ್ಯಾನ್ ವರದಿಯಲ್ಲಿ ಕ್ಯಾನ್ಸರ್ ಇಲ್ಲವೆನ್ನಲಾಗಿತ್ತು. ನಂತರ ಬಯೋಪ್ಸಿ ನಡೆಸಿದಾಗ ಪಿತ್ತಕೋಶದಲ್ಲಿ ಕ್ಯಾನ್ಸರ್ ಇರುವುದಾಗಿ ದೃಢಪಟ್ಟಿತು. ತಕ್ಷಣವೇ ರೊಬೋಟಿಕ್ ಶಸ್ತ್ರಚಿಕಿತ್ಸೆಯ ಮೂಲಕ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ (ಪಿತ್ತಕೋಶವನ್ನು ಸಂಪೂರ್ಣವಾಗಿ ತೆಗೆದುಹಾಕುವುದು) ಮಾಡಲಾಯಿತು. ಕ್ಯಾನ್ಸರ್ ಸ್ವಲ್ಪ ಲಿವರ್ಗೂ ಹಬ್ಬಿಕೊಂಡಿದ್ದರಿಂದ, ಲಿವರ್ನ ಒಂದು ಭಾಗವನ್ನೂ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು.
ಡಾ. ಕೌಶಿಕ್ ಸುಬ್ರಮಣಿಯನ್ ಅವರು, ಪಿತ್ತಕೋಶ ಸಂಬಂಧಿತ ಕಾಯಿಲೆಗಳಲ್ಲಿ ತಕ್ಷಣದ ತಪಾಸಣೆ ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದು ಅತ್ಯಂತ ಅವಶ್ಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…