ಬೆಂಗಳೂರು ವೈಟ್ ಫೀಲ್ದ್ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ 45 ವರ್ಷದ ಬಾಬು ಎಂಬ ರೋಗಿಗೆ, ಪಿತ್ತಕೋಶದ ಕ್ಯಾನ್ಸರ್ ಇರುವುದು ಸ್ಕ್ಯಾನ್ನಲ್ಲಿ ತೋರಿಸಲಿಲ್ಲವಾದರೂ, ಮೆಡಿಕವರ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರು ತಮ್ಮ ವೈದ್ಯಕೀಯ ಅನುಭವದಿಂದಲೇ ಗಂಭೀರತೆಯನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ ಪರಿಣಾಮ, ರೋಗಿಯು ಜೀವಾಪಾಯದಿಂದ ಪಾರಾದ್ದಾರೆ.
ಬಾಬು ಅವರು 30 ದಿನಗಳ ಕಾಲ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅದನ್ನು ಸಾಮಾನ್ಯ ಗ್ರಾಸ್ಟ್ರಿಕ್ ಸಮಸ್ಯೆ ಎಂದು ಅನಿಸಿಕೊಂಡಿದ್ದರು. ಅವರು ಚಿಕಿತ್ಸೆಗಾಗಿ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಕೌಶಿಕ್ ಅವರ ಸಲಹೆ ಪಡೆದುಕೊಂಡರು. ಡಾಕ್ಟರ್ ಅವರು ತಕ್ಷಣವೇ ಇತರೆ ಪರೀಕ್ಷೆಗಳನ್ನು ಮಾಡಿಸಿ, ಪಿತ್ತಕೋಶದ ಕ್ಯಾನ್ಸರ್ ಆಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದರು.
ಆದರೆ ಪ್ರಾಥಮಿಕ ಸ್ಕ್ಯಾನ್ ವರದಿಯಲ್ಲಿ ಕ್ಯಾನ್ಸರ್ ಇಲ್ಲವೆನ್ನಲಾಗಿತ್ತು. ನಂತರ ಬಯೋಪ್ಸಿ ನಡೆಸಿದಾಗ ಪಿತ್ತಕೋಶದಲ್ಲಿ ಕ್ಯಾನ್ಸರ್ ಇರುವುದಾಗಿ ದೃಢಪಟ್ಟಿತು. ತಕ್ಷಣವೇ ರೊಬೋಟಿಕ್ ಶಸ್ತ್ರಚಿಕಿತ್ಸೆಯ ಮೂಲಕ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ (ಪಿತ್ತಕೋಶವನ್ನು ಸಂಪೂರ್ಣವಾಗಿ ತೆಗೆದುಹಾಕುವುದು) ಮಾಡಲಾಯಿತು. ಕ್ಯಾನ್ಸರ್ ಸ್ವಲ್ಪ ಲಿವರ್ಗೂ ಹಬ್ಬಿಕೊಂಡಿದ್ದರಿಂದ, ಲಿವರ್ನ ಒಂದು ಭಾಗವನ್ನೂ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು.
ಡಾ. ಕೌಶಿಕ್ ಸುಬ್ರಮಣಿಯನ್ ಅವರು, ಪಿತ್ತಕೋಶ ಸಂಬಂಧಿತ ಕಾಯಿಲೆಗಳಲ್ಲಿ ತಕ್ಷಣದ ತಪಾಸಣೆ ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದು ಅತ್ಯಂತ ಅವಶ್ಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…