ಬೆಂಗಳೂರು ವೈಟ್ ಫೀಲ್ದ್ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ 45 ವರ್ಷದ ಬಾಬು ಎಂಬ ರೋಗಿಗೆ, ಪಿತ್ತಕೋಶದ ಕ್ಯಾನ್ಸರ್ ಇರುವುದು ಸ್ಕ್ಯಾನ್ನಲ್ಲಿ ತೋರಿಸಲಿಲ್ಲವಾದರೂ, ಮೆಡಿಕವರ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರು ತಮ್ಮ ವೈದ್ಯಕೀಯ ಅನುಭವದಿಂದಲೇ ಗಂಭೀರತೆಯನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ ಪರಿಣಾಮ, ರೋಗಿಯು ಜೀವಾಪಾಯದಿಂದ ಪಾರಾದ್ದಾರೆ.
ಬಾಬು ಅವರು 30 ದಿನಗಳ ಕಾಲ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅದನ್ನು ಸಾಮಾನ್ಯ ಗ್ರಾಸ್ಟ್ರಿಕ್ ಸಮಸ್ಯೆ ಎಂದು ಅನಿಸಿಕೊಂಡಿದ್ದರು. ಅವರು ಚಿಕಿತ್ಸೆಗಾಗಿ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಡಾ. ಕೌಶಿಕ್ ಅವರ ಸಲಹೆ ಪಡೆದುಕೊಂಡರು. ಡಾಕ್ಟರ್ ಅವರು ತಕ್ಷಣವೇ ಇತರೆ ಪರೀಕ್ಷೆಗಳನ್ನು ಮಾಡಿಸಿ, ಪಿತ್ತಕೋಶದ ಕ್ಯಾನ್ಸರ್ ಆಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದರು.
ಆದರೆ ಪ್ರಾಥಮಿಕ ಸ್ಕ್ಯಾನ್ ವರದಿಯಲ್ಲಿ ಕ್ಯಾನ್ಸರ್ ಇಲ್ಲವೆನ್ನಲಾಗಿತ್ತು. ನಂತರ ಬಯೋಪ್ಸಿ ನಡೆಸಿದಾಗ ಪಿತ್ತಕೋಶದಲ್ಲಿ ಕ್ಯಾನ್ಸರ್ ಇರುವುದಾಗಿ ದೃಢಪಟ್ಟಿತು. ತಕ್ಷಣವೇ ರೊಬೋಟಿಕ್ ಶಸ್ತ್ರಚಿಕಿತ್ಸೆಯ ಮೂಲಕ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ (ಪಿತ್ತಕೋಶವನ್ನು ಸಂಪೂರ್ಣವಾಗಿ ತೆಗೆದುಹಾಕುವುದು) ಮಾಡಲಾಯಿತು. ಕ್ಯಾನ್ಸರ್ ಸ್ವಲ್ಪ ಲಿವರ್ಗೂ ಹಬ್ಬಿಕೊಂಡಿದ್ದರಿಂದ, ಲಿವರ್ನ ಒಂದು ಭಾಗವನ್ನೂ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು.
ಡಾ. ಕೌಶಿಕ್ ಸುಬ್ರಮಣಿಯನ್ ಅವರು, ಪಿತ್ತಕೋಶ ಸಂಬಂಧಿತ ಕಾಯಿಲೆಗಳಲ್ಲಿ ತಕ್ಷಣದ ತಪಾಸಣೆ ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡುವುದು ಅತ್ಯಂತ ಅವಶ್ಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…