ಅನುಭವಮಂಟಪ ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಬಸವಣ್ಣನವರು ರೂಪಿಸಿದ ಅನುಭವಮಂಟಪವು ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆಯಾಗಿತ್ತು. ಕನ್ನಡ ನೆಲದಲ್ಲಿ ನಿರ್ಮಾಣವಾದ ವಚನ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ಕನ್ನಡದ ಕೊಡುಗೆಯಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ  ವಿ.ಎಸ್.ಹೆಗಡೆ ತಿಳಿಸಿದರು.

ನಗರದ ಡಾ.ರಾಜ್ ಕುಮಾರ್ ಕಲಾಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಸವಜಯಂತಿ ಮತ್ತು ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಯಕವೇ ಕೈಲಾಸ ಎಂಬ ಚಿಂತನೆ, ಸಾಮಾಜಿಕ ಹೊಣೆಗಾರಿಕೆ, ಸಮಾನತೆ ಮತ್ತು ಸಹಬಾಳ್ವೆ ಶರಣರ ಪ್ರತಿಪ್ರಪಾದನೆಯಾಗಿದೆ. ಬಸವಣ್ಣನವರ ಪ್ರೇರಣೆಯಿಂದ ಶರಣರು ಸರಳವಾದ, ನೇರ ನಡೆ- ನುಡಿಯ ಜನಸಾಹಿತ್ಯವಾದ ವಚನಸಾಹಿತ್ಯ ರಚನೆಗೆ  ಕಾರಣವಾಯಿತು.

ಬಸವಣ್ಣನವರ ಕಾಯಕತತ್ವ ವಿಶ್ಚಮಾನ್ಯ ಹಾಗೂ ಸಾರ್ವಕಾಲಿಕ ಆದರ್ಶವಾಗಿದೆ. ಅನುಭವ ಮಂಟಪದ ಮೂಲಕ ಪ್ರಜಾಸತ್ತಾತ್ಮಕ ಚಿಂತನೆಗಳಿಗೆ ಅವಕಾಶ ದೊರೆಯಿತು ಎಂದು ಅಭಿಪ್ರಾಯಪಟ್ಟರು.

ಬಿ.ಎಸ್‌.ಎನ್.ಎಲ್. ನಿವೃತ್ತ ನೌಕರರಾದ ನರಸಿಂಹಮೂರ್ತಿ ಮಾತನಾಡಿ,  ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಸ್ತ್ರೀ ಸ್ವಾತಂತ್ರ್ಯ ಹಾಗೂ ಲಿಂಗಸಮಾನತೆಗಾಗಿ ನಡೆಸಿದ ಹೋರಾಟ ಅನನ್ಯ. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯ ನಿವಾರಣೆಗೆ ಬಸವಣ್ಣನವರ ಚಿಂತನೆಗಳು ದಾರಿದೀಪವಾಗಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಮಾಜ ಸೇವಕ ಅಬ್ದುಲ್‌ ಸುಭಾನ್ ಸಾಬ್ ರವರನ್ನು ಸನ್ಮಾನಿಸುತ್ತಿರುವು ಶ್ಲಾಘನೀಯ ವಿಚಾರವಾಗಿದೆ. ಕಾಯಕ ನಿಷ್ಠೆಯ ಮೂಲಕ ಅಬ್ದುಲ್‌ ಸುಭಾನ್ ಸಾಬ್ ರವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಅಭಿನಂದನಾರ್ಹ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಜನಪರ ಸಂಘಟನೆಯ ಮುಖಂಡರಾದ ಆರಿಫ್, ಫೀರ್ ಪಾಷಾ, ಶಂಶೀರ್ ಮೊದಲಾದವರು  ಭಾಗವಹಿಸಿದ್ದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

9 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

13 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

15 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

17 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago