ಅನುಭವಮಂಟಪ ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಬಸವಣ್ಣನವರು ರೂಪಿಸಿದ ಅನುಭವಮಂಟಪವು ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆಯಾಗಿತ್ತು. ಕನ್ನಡ ನೆಲದಲ್ಲಿ ನಿರ್ಮಾಣವಾದ ವಚನ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ಕನ್ನಡದ ಕೊಡುಗೆಯಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ  ವಿ.ಎಸ್.ಹೆಗಡೆ ತಿಳಿಸಿದರು.

ನಗರದ ಡಾ.ರಾಜ್ ಕುಮಾರ್ ಕಲಾಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಸವಜಯಂತಿ ಮತ್ತು ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಯಕವೇ ಕೈಲಾಸ ಎಂಬ ಚಿಂತನೆ, ಸಾಮಾಜಿಕ ಹೊಣೆಗಾರಿಕೆ, ಸಮಾನತೆ ಮತ್ತು ಸಹಬಾಳ್ವೆ ಶರಣರ ಪ್ರತಿಪ್ರಪಾದನೆಯಾಗಿದೆ. ಬಸವಣ್ಣನವರ ಪ್ರೇರಣೆಯಿಂದ ಶರಣರು ಸರಳವಾದ, ನೇರ ನಡೆ- ನುಡಿಯ ಜನಸಾಹಿತ್ಯವಾದ ವಚನಸಾಹಿತ್ಯ ರಚನೆಗೆ  ಕಾರಣವಾಯಿತು.

ಬಸವಣ್ಣನವರ ಕಾಯಕತತ್ವ ವಿಶ್ಚಮಾನ್ಯ ಹಾಗೂ ಸಾರ್ವಕಾಲಿಕ ಆದರ್ಶವಾಗಿದೆ. ಅನುಭವ ಮಂಟಪದ ಮೂಲಕ ಪ್ರಜಾಸತ್ತಾತ್ಮಕ ಚಿಂತನೆಗಳಿಗೆ ಅವಕಾಶ ದೊರೆಯಿತು ಎಂದು ಅಭಿಪ್ರಾಯಪಟ್ಟರು.

ಬಿ.ಎಸ್‌.ಎನ್.ಎಲ್. ನಿವೃತ್ತ ನೌಕರರಾದ ನರಸಿಂಹಮೂರ್ತಿ ಮಾತನಾಡಿ,  ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಸ್ತ್ರೀ ಸ್ವಾತಂತ್ರ್ಯ ಹಾಗೂ ಲಿಂಗಸಮಾನತೆಗಾಗಿ ನಡೆಸಿದ ಹೋರಾಟ ಅನನ್ಯ. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯ ನಿವಾರಣೆಗೆ ಬಸವಣ್ಣನವರ ಚಿಂತನೆಗಳು ದಾರಿದೀಪವಾಗಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಮಾಜ ಸೇವಕ ಅಬ್ದುಲ್‌ ಸುಭಾನ್ ಸಾಬ್ ರವರನ್ನು ಸನ್ಮಾನಿಸುತ್ತಿರುವು ಶ್ಲಾಘನೀಯ ವಿಚಾರವಾಗಿದೆ. ಕಾಯಕ ನಿಷ್ಠೆಯ ಮೂಲಕ ಅಬ್ದುಲ್‌ ಸುಭಾನ್ ಸಾಬ್ ರವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಅಭಿನಂದನಾರ್ಹ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಜನಪರ ಸಂಘಟನೆಯ ಮುಖಂಡರಾದ ಆರಿಫ್, ಫೀರ್ ಪಾಷಾ, ಶಂಶೀರ್ ಮೊದಲಾದವರು  ಭಾಗವಹಿಸಿದ್ದರು.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

5 minutes ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

1 hour ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

6 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

7 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

24 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago