ಅನುಭವಮಂಟಪ ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಬಸವಣ್ಣನವರು ರೂಪಿಸಿದ ಅನುಭವಮಂಟಪವು ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆಯಾಗಿತ್ತು. ಕನ್ನಡ ನೆಲದಲ್ಲಿ ನಿರ್ಮಾಣವಾದ ವಚನ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ಕನ್ನಡದ ಕೊಡುಗೆಯಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ  ವಿ.ಎಸ್.ಹೆಗಡೆ ತಿಳಿಸಿದರು.

ನಗರದ ಡಾ.ರಾಜ್ ಕುಮಾರ್ ಕಲಾಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಸವಜಯಂತಿ ಮತ್ತು ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಯಕವೇ ಕೈಲಾಸ ಎಂಬ ಚಿಂತನೆ, ಸಾಮಾಜಿಕ ಹೊಣೆಗಾರಿಕೆ, ಸಮಾನತೆ ಮತ್ತು ಸಹಬಾಳ್ವೆ ಶರಣರ ಪ್ರತಿಪ್ರಪಾದನೆಯಾಗಿದೆ. ಬಸವಣ್ಣನವರ ಪ್ರೇರಣೆಯಿಂದ ಶರಣರು ಸರಳವಾದ, ನೇರ ನಡೆ- ನುಡಿಯ ಜನಸಾಹಿತ್ಯವಾದ ವಚನಸಾಹಿತ್ಯ ರಚನೆಗೆ  ಕಾರಣವಾಯಿತು.

ಬಸವಣ್ಣನವರ ಕಾಯಕತತ್ವ ವಿಶ್ಚಮಾನ್ಯ ಹಾಗೂ ಸಾರ್ವಕಾಲಿಕ ಆದರ್ಶವಾಗಿದೆ. ಅನುಭವ ಮಂಟಪದ ಮೂಲಕ ಪ್ರಜಾಸತ್ತಾತ್ಮಕ ಚಿಂತನೆಗಳಿಗೆ ಅವಕಾಶ ದೊರೆಯಿತು ಎಂದು ಅಭಿಪ್ರಾಯಪಟ್ಟರು.

ಬಿ.ಎಸ್‌.ಎನ್.ಎಲ್. ನಿವೃತ್ತ ನೌಕರರಾದ ನರಸಿಂಹಮೂರ್ತಿ ಮಾತನಾಡಿ,  ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಸ್ತ್ರೀ ಸ್ವಾತಂತ್ರ್ಯ ಹಾಗೂ ಲಿಂಗಸಮಾನತೆಗಾಗಿ ನಡೆಸಿದ ಹೋರಾಟ ಅನನ್ಯ. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯ ನಿವಾರಣೆಗೆ ಬಸವಣ್ಣನವರ ಚಿಂತನೆಗಳು ದಾರಿದೀಪವಾಗಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಮಾಜ ಸೇವಕ ಅಬ್ದುಲ್‌ ಸುಭಾನ್ ಸಾಬ್ ರವರನ್ನು ಸನ್ಮಾನಿಸುತ್ತಿರುವು ಶ್ಲಾಘನೀಯ ವಿಚಾರವಾಗಿದೆ. ಕಾಯಕ ನಿಷ್ಠೆಯ ಮೂಲಕ ಅಬ್ದುಲ್‌ ಸುಭಾನ್ ಸಾಬ್ ರವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಅಭಿನಂದನಾರ್ಹ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಜನಪರ ಸಂಘಟನೆಯ ಮುಖಂಡರಾದ ಆರಿಫ್, ಫೀರ್ ಪಾಷಾ, ಶಂಶೀರ್ ಮೊದಲಾದವರು  ಭಾಗವಹಿಸಿದ್ದರು.

Ramesh Babu

Journalist

Recent Posts

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

3 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

23 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

1 day ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 day ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago