ಅನುಭವಮಂಟಪ ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಬಸವಣ್ಣನವರು ರೂಪಿಸಿದ ಅನುಭವಮಂಟಪವು ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆಯಾಗಿತ್ತು. ಕನ್ನಡ ನೆಲದಲ್ಲಿ ನಿರ್ಮಾಣವಾದ ವಚನ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ಕನ್ನಡದ ಕೊಡುಗೆಯಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ  ವಿ.ಎಸ್.ಹೆಗಡೆ ತಿಳಿಸಿದರು.

ನಗರದ ಡಾ.ರಾಜ್ ಕುಮಾರ್ ಕಲಾಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಸವಜಯಂತಿ ಮತ್ತು ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಯಕವೇ ಕೈಲಾಸ ಎಂಬ ಚಿಂತನೆ, ಸಾಮಾಜಿಕ ಹೊಣೆಗಾರಿಕೆ, ಸಮಾನತೆ ಮತ್ತು ಸಹಬಾಳ್ವೆ ಶರಣರ ಪ್ರತಿಪ್ರಪಾದನೆಯಾಗಿದೆ. ಬಸವಣ್ಣನವರ ಪ್ರೇರಣೆಯಿಂದ ಶರಣರು ಸರಳವಾದ, ನೇರ ನಡೆ- ನುಡಿಯ ಜನಸಾಹಿತ್ಯವಾದ ವಚನಸಾಹಿತ್ಯ ರಚನೆಗೆ  ಕಾರಣವಾಯಿತು.

ಬಸವಣ್ಣನವರ ಕಾಯಕತತ್ವ ವಿಶ್ಚಮಾನ್ಯ ಹಾಗೂ ಸಾರ್ವಕಾಲಿಕ ಆದರ್ಶವಾಗಿದೆ. ಅನುಭವ ಮಂಟಪದ ಮೂಲಕ ಪ್ರಜಾಸತ್ತಾತ್ಮಕ ಚಿಂತನೆಗಳಿಗೆ ಅವಕಾಶ ದೊರೆಯಿತು ಎಂದು ಅಭಿಪ್ರಾಯಪಟ್ಟರು.

ಬಿ.ಎಸ್‌.ಎನ್.ಎಲ್. ನಿವೃತ್ತ ನೌಕರರಾದ ನರಸಿಂಹಮೂರ್ತಿ ಮಾತನಾಡಿ,  ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಸ್ತ್ರೀ ಸ್ವಾತಂತ್ರ್ಯ ಹಾಗೂ ಲಿಂಗಸಮಾನತೆಗಾಗಿ ನಡೆಸಿದ ಹೋರಾಟ ಅನನ್ಯ. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯ ನಿವಾರಣೆಗೆ ಬಸವಣ್ಣನವರ ಚಿಂತನೆಗಳು ದಾರಿದೀಪವಾಗಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಮಾಜ ಸೇವಕ ಅಬ್ದುಲ್‌ ಸುಭಾನ್ ಸಾಬ್ ರವರನ್ನು ಸನ್ಮಾನಿಸುತ್ತಿರುವು ಶ್ಲಾಘನೀಯ ವಿಚಾರವಾಗಿದೆ. ಕಾಯಕ ನಿಷ್ಠೆಯ ಮೂಲಕ ಅಬ್ದುಲ್‌ ಸುಭಾನ್ ಸಾಬ್ ರವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಅಭಿನಂದನಾರ್ಹ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಜನಪರ ಸಂಘಟನೆಯ ಮುಖಂಡರಾದ ಆರಿಫ್, ಫೀರ್ ಪಾಷಾ, ಶಂಶೀರ್ ಮೊದಲಾದವರು  ಭಾಗವಹಿಸಿದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

5 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

11 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

18 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

19 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago