ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ ಸಚಿವ ಸ್ಥಾನ ನೀಡಬೇಕು, ಗೃಹ ಅಥವಾ ಕಂದಾಯ ಇಲಾಖೆಗಳನ್ನು ನಿರ್ವಹಿಸುವ ಶಕ್ತಿ ಇರುವ ಮುನಿಯಪ್ಪನವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನಾದರೂ ನೀಡಬೇಕು ಎಂದು ದೊಡ್ಡಬಳ್ಳಾಪುರ ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮನು.ಆರ್.ವಿ ಒತ್ತಾಯ ಮಾಡಿದ್ದಾರೆ.

ಕರ್ನಾಟಕದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಅದಕ್ಕನುಗುಣವಾಗಿ ಮಂತ್ರಿಸ್ಥಾನ ನೀಡಬೇಕು, ಜನಪ್ರಿಯ ಶಾಸಕರು ಹಾಗೂ ಹಿರಿಯರ ಅನುಭವ ಪರಿಗಣಿಸಿ ಪ್ರಬಲವಾದ ಸಚಿವ ಸ್ಥಾನ ನೀಡಬೇಕು‌. ಎಡಗೈ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿರುವ ಕೆ.ಎಚ್. ಮುನಿಯಪ್ಪನವರನ್ನು ಉಪಮುಖ್ಯಮಂತ್ರಿಯಾಗಿ ಮಾಡಿ, ಸಮಾಜ ಕಲ್ಯಾಣ ಸಚಿವ ಸ್ಥಾನವನ್ನೂ ನೀಡಬೇಕು ಅವರಿಗೆ ಇರುವ ಅಪಾರ ಅನುಭವವನ್ನು ಡಿ.ಕೆ.ಶಿವಕುಮಾರ್ ಸಂಪುಟ ಬಳಸಿಕೊಳ್ಳಬೇಕೆಂದರು.

Ramesh Babu

Journalist

Recent Posts

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

8 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

14 hours ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

21 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

1 day ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

2 days ago