ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ ಸಚಿವ ಸ್ಥಾನ ನೀಡಬೇಕು, ಗೃಹ ಅಥವಾ ಕಂದಾಯ ಇಲಾಖೆಗಳನ್ನು ನಿರ್ವಹಿಸುವ ಶಕ್ತಿ ಇರುವ ಮುನಿಯಪ್ಪನವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನಾದರೂ ನೀಡಬೇಕು ಎಂದು ದೊಡ್ಡಬಳ್ಳಾಪುರ ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮನು.ಆರ್.ವಿ ಒತ್ತಾಯ ಮಾಡಿದ್ದಾರೆ.

ಕರ್ನಾಟಕದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಅದಕ್ಕನುಗುಣವಾಗಿ ಮಂತ್ರಿಸ್ಥಾನ ನೀಡಬೇಕು, ಜನಪ್ರಿಯ ಶಾಸಕರು ಹಾಗೂ ಹಿರಿಯರ ಅನುಭವ ಪರಿಗಣಿಸಿ ಪ್ರಬಲವಾದ ಸಚಿವ ಸ್ಥಾನ ನೀಡಬೇಕು‌. ಎಡಗೈ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿರುವ ಕೆ.ಎಚ್. ಮುನಿಯಪ್ಪನವರನ್ನು ಉಪಮುಖ್ಯಮಂತ್ರಿಯಾಗಿ ಮಾಡಿ, ಸಮಾಜ ಕಲ್ಯಾಣ ಸಚಿವ ಸ್ಥಾನವನ್ನೂ ನೀಡಬೇಕು ಅವರಿಗೆ ಇರುವ ಅಪಾರ ಅನುಭವವನ್ನು ಡಿ.ಕೆ.ಶಿವಕುಮಾರ್ ಸಂಪುಟ ಬಳಸಿಕೊಳ್ಳಬೇಕೆಂದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago