Categories: ಲೇಖನ

ಅನೈತಿಕ ಮತ್ತು ಅಕ್ರಮ ಸಂಬಂಧಗಳೆಂಬ ಸಾವಿನ ಹೆದ್ದಾರಿ….

ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಸಮಾಜದಲ್ಲಿ ಆಗುತ್ತಿರುವ ಕೆಟ್ಟ ಮತ್ತು ಅಪಾಯಕಾರಿ ಬದಲಾವಣೆ ಎಂದರೆ ಅದು ಅನೈತಿಕ ಮತ್ತು ಅಕ್ರಮ ಸಂಬಂಧಗಳು ಮತ್ತು ಅದರಿಂದಾಗಿ ನಡೆಯುತ್ತಿರುವ ಭೀಕರ ಕೊಲೆಗಳು……

ಮನುಷ್ಯ ಸಂಬಂಧಗಳು, ನಂಬಿಕೆಗಳು, ಕೌಟುಂಬಿಕ ವ್ಯವಸ್ಥೆಗಳು, ಪ್ರೀತಿ ಪ್ರೇಮ ಪ್ರಣಯದ ಪಾವಿತ್ರ್ಯತೆ, ಕಾನೂನು ಸುವ್ಯವಸ್ಥೆ ಒಟ್ಟಾರೆ ಸಾಮಾಜಿಕ ವ್ಯವಸ್ಥೆಯೇ ಕುಸಿದು ಬೀಳುವ ಹಂತಕ್ಕೆ ತಲುಪಬಹುದು ಎಂಬಷ್ಟು ವೇಗವಾಗಿ ಮತ್ತು ತೀವ್ರವಾಗಿ ವ್ಯಾಪಿಸುತ್ತಿದೆ……..

ಬಹಳ ಹಿಂದೆ ಕಡಿಮೆ ಜನಸಂಖ್ಯೆ, ಸಂಪರ್ಕ ಮಾಧ್ಯಮಗಳ ಕೊರತೆ, ಕೌಟುಂಬಿಕ ಮೌಲ್ಯಗಳ ಗಾಢತೆ, ಹೆಣ್ಣು ಗಂಡು ಸಂಬಂಧಗಳ ಗೌಪ್ಯತೆ, ಆರ್ಥಿಕ ಅಸಮಾನತೆ, ಪುರುಷ ಕೇಂದ್ರಿತ ಸಮಾಜ ಮುಂತಾದ ಕಾರಣಗಳಿಂದ ಅಕ್ರಮ ಸಂಬಂಧಗಳು ಕಡಿಮೆ ಇದ್ದವು, ಹೆಚ್ಚು ಹೊರಗೆ ಬರುತ್ತಿರಲಿಲ್ಲ ಮತ್ತು ಅದಕ್ಕೆ ಬಹುತೇಕ ಪುರುಷರೇ ಹೆಚ್ಚು ಹೊಣೆಗಾರರಾಗಿದ್ದರು……..

ಆದರೆ ಮಹಿಳಾ ಸ್ವಾತಂತ್ರ್ಯ, ಸಮಾನತೆ, ಸ್ವಾವಲಂಬನೆ, ಉದ್ಯೋಗ, ನಗರೀಕರಣ, ಸಮೂಹ ಸಂಪರ್ಕ ಮಾಧ್ಯಮಗಳ ಕ್ರಾಂತಿ, ಸಣ್ಣ ಕುಟುಂಬಗಳ ಅನಿವಾರ್ಯತೆ, ವಲಸೆ, ದೂರ ಪ್ರದೇಶಗಳಲ್ಲಿ ವಾಸ, ಹಣ ಕೇಂದ್ರಿತ ಸಮಾಜ, ಮೌಲ್ಯಗಳ ಕುಸಿತ, ಪುರುಷ ದೌರ್ಜನ್ಯದ ವಿರುದ್ಧ ಮಹಿಳಾ ಜಾಗೃತಿ, ಕಾನೂನಿನ ಬೆಂಬಲ, ಟಿವಿ, ಸಿನಿಮಾ, ಧಾರಾವಾಹಿಗಳ ಪ್ರಭಾವ, ಅಜ್ಞಾನ, ಅಹಂಕಾರ, ಬದುಕಲು ದೊರೆತ ಅಸಂಖ್ಯ ಅವಕಾಶಗಳು, ವ್ಯಕ್ತಿ ಸ್ವಾತಂತ್ರ್ಯ ಇತ್ಯಾದಿ ಹಲವಾರು ಕಾರಣಗಳಿಂದ ಮಹಿಳೆ ಮತ್ತು ಪುರುಷರಿಬ್ಬರ ಕಡೆಯಿಂದಲೂ ಅನೈತಿಕ ಚಟುವಟಿಕೆಗಳು ಹೆಚ್ಚಾದವು….

ಈಗ ಅವು ನಿಯಂತ್ರಣ ಮೀರಿ ದುಷ್ಕೃತ್ಯಗಳು ನಡೆಯುತ್ತಿವೆ. ಟಿವಿ, ಪತ್ರಿಕೆ, ಸಾಮಾಜಿಕ ಮಾಧ್ಯಮಗಳಲ್ಲಿ ಇವು ನಿರಂತರವಾಗಿ ಪ್ರಸಾರವಾಗುತ್ತಿವೆ…….

ಅನಾರೋಗ್ಯ, ಆತ್ಮಹತ್ಯೆ ಮತ್ತು ಅಪಘಾತದಿಂದ ಉಂಟಾಗುತ್ತಿರುವ ಸಾವು ನೋವಿನ ಜೊತೆಗೆ ಭಾರತೀಯ ಸಮಾಜವನ್ನು ಕಾಡುತ್ತಿರುವ ಮತ್ತೊಂದು ಬಹುಮಖ್ಯ ಸಮಸ್ಯೆಯಾಗಿ ಅನೈತಿಕ ಸಂಬಂಧಗಳು ಮತ್ತು ಕೊಲೆಗಳು ನಮ್ಮ ಜೀವನದಲ್ಲಿ ಭಾರಿ ಬದಲಾವಣೆಗೂ ಕಾರಣವಾಗಿದೆ…

ಅನೈತಿಕತೆ ಎಂಬುದು ಅನೇಕ ಆಯಾಮಗಳನ್ನು ಹೊಂದಿದೆ. ಆದರೆ ಹೆಣ್ಣು ಗಂಡಿನ ಲೈಂಗಿಕತೆಗೆ ಸಂಬಂಧಿಸಿದ ಅನೈತಿಕತೆ ಇತ್ತೀಚೆಗೆ ಅತ್ಯಂತ ಕಳವಳಕಾರಿ ಹಂತ ತಲುಪಿದೆ. ಅದರಲ್ಲೂ ಮದುವೆಯಾದ ಗಂಡು ಅಥವಾ ಹೆಣ್ಣು ಇನ್ನೊಬ್ಬ ಪುರುಷ ಅಥವಾ ಮಹಿಳೆಯೊಂದಿಗೆ ಸಂಬಂಧ ಹೊಂದುವುದು ಸಧ್ಯದ ಗಂಭೀರ ವಿಷಯ……..

ಇದು ತೀರಾ ಖಾಸಗಿ ವಿಷಯವಾದರು ಸಾಮಾಜಿಕ ಜಾಲತಾಣಗಳ ಸಂಪರ್ಕ ಕ್ರಾಂತಿಯಿಂದಾಗಿ ನಾವೆಲ್ಲಾ ಇದರಲ್ಲಿ ಪ್ರತ್ಯಕ್ಷವಾಗಿಯೋ , ಪರೋಕ್ಷವಾಗಿಯೋ ಅಥವಾ ಮಾನಸಿಕ ಅನುಮಾನಕ್ಕೋ, ಅಥವಾ ವೈಯಕ್ತಿಕ ವೇದನೆಗೋ ಕಾರಣವಾಗುತ್ತಿದ್ದೇವೆ.
ಕೆಲವೊಮ್ಮೆ ಉದ್ದೇಶಪೂರ್ವಕವಾಗಿ ಕೆಲವೊಮ್ಮೆ ನಮಗರಿವಿಲ್ಲದೇ, ಮತ್ತೆ ಕೆಲವೊಮ್ಮೆ ಆಕಸ್ಮಿಕವಾಗಿ ನಾವು ಇದರ ಒಳಸುಳಿಗೆ ಸಿಲುಕುವ ಸಾಧ್ಯತೆಗಳೂ ಇದೆ. ಈ ಸಂದರ್ಭದಲ್ಲಿ ನಾವೆಲ್ಲಾ ಪರಿಚಿತ ಮತ್ತು ಅಪರಿಚಿತ ಗೆಳೆಯರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಏಕೆಂದರೆ ಈ ಸಂಬಂಧಗಳು ಬೇರೆ ಎಲ್ಲೋ ಏರ್ಪಡುವುದಿಲ್ಲ. ಅದು ನಮ್ಮ ಸುತ್ತಮುತ್ತಲ ಸ್ನೇಹಿತರ ನಡುವೆಯೇ ಸಂಭವಿಸುತ್ತದೆ…..

ಹೇಗೆ ಅರ್ಥೈಸುವುದು ಈ ಸಂಬಂಧಗಳನ್ನು,
ಒಂದುಕಡೆ ವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ನನ್ನ ದೇಹ ನನ್ನ ಆಯ್ಕೆ ಎಂಬ ಧೋರಣೆ, ಮತ್ತೊಂದು ಕಡೆ ಬಲವಂತವಲ್ಲದ, ಕಾನೂನಿನ ಪ್ರಕಾರ ವಯಸ್ಸಿನ ಗಡಿ ದಾಟಿದ ಎಲ್ಲಾ ಒಪ್ಪಿತ ಸಂಬಂಧಗಳು ನೈತಿಕವೇ ಎಂಬ ವಾದ, ಮದುವೆಯಾದ ಮಾತ್ರಕ್ಕೇ ನಾವೇನು ಯಾರಿಗೂ ಮಾರಾಟವಾಗುವುದಿಲ್ಲ ಮತ್ತು ಹಾಗೆ ಬಹಿರಂಗವಾಗಿ ಹೇಳದಿದ್ದರೂ ತಮ್ಮ ಸಂಪರ್ಕಗಳಿಂದ ಆಕರ್ಷಣೆಗೆ ಒಳಗಾಗಿ ಈ ರೀತಿಯ ಸಂಬಂಧವನ್ನು ಮುಂದುವರಿಸುತ್ತಿರುವವರು ಅನೇಕರಿದ್ದಾರೆ……

ಇನ್ನೊಂದೆಡೆ ಗಂಡು ಹೆಣ್ಣು ಇಬ್ಬರೂ ಮದುವೆಯಾದ ತಕ್ಷಣ ತಮ್ಮ ದೇಹದ ಮೇಲೆ ಸ್ವಾತಂತ್ರ್ಯ ಕಳೆದುಕೊಳ್ಳುತ್ತಾರೆ, ಅದು ಇಬ್ಬರಿಗೂ ಹಂಚಿಕೆಯಾಗುತ್ತದೆ, ಸಾಯುವವರೆಗೂ ಅಥವಾ ಅಧೀಕೃತವಾಗಿ ವಿಚ್ಛೇದನ ಆಗುವವರೆಗೂ ಬೇರೆ ಯಾರೊಂದಿಗೂ ಸೇರುವಂತಿಲ್ಲ ಅದು ಅನೈತಿಕ ಎಂದೂ ವಾದ ಮಾಡಲಾಗುತ್ತದೆ……

ಬಹಳಷ್ಟು ಘಟನೆಗಳಲ್ಲಿ ಹೆಣ್ಣನ್ನೇ ಮುಖ್ಯ ಗುರಿಯಾಗಿಸಲಾಗುತ್ತದೆ ಮತ್ತು ಸಧ್ಯದ ನಮ್ಮ ಮನಸ್ಥಿತಿಯಲ್ಲಿ ಹೆಣ್ಣು ಖಾಸಗಿ ಆಸ್ತಿ ಎಂದೇ ಭಾವಿಸಲಾಗಿದೆ. ಆಕೆ ಇನ್ನೊಬ್ಬರ ಸಂಬಂಧ ಬೆಳೆಸಿದಲ್ಲಿ ಆ ಇಬ್ಬರನ್ನೂ ಕೊಲ್ಲದೆ ಆ ವ್ಯಕ್ತಿಗೆ ಬದುಕಲು ಸಾಧ್ಯವೇ ಆಗದ ಮಾನಸಿಕ ಸ್ಥಿತಿ ಏರ್ಪಟ್ಟಿದೆ. ಇದಂತೂ ಭಯಂಕರ ವಾತಾವರಣ. ಚರ್ಚೆಗಳಲ್ಲಿ, ವಿಚಾರ ಸಂಕಿರಣಗಳಲ್ಲಿ, ಉಪನ್ಯಾಸಗಳಲ್ಲಿ ಪುಂಖಾನುಪುಂಖವಾಗಿ ಮಾತನಾಡಬಹುದು. ಆದರೆ ವಾಸ್ತವ ಮಾತ್ರ ಘನಘೋರ. ಮಹಿಳೆಯರು ಸಹ ಇದಕ್ಕಾಗಿ ಕೊಲೆ ಮಾಡುವ ಮಾತು ಮಾಡಿಸುವ ಹಂತ ತಲುಪಿದ್ದಾರೆ…….

ಸ್ನೇಹಿತರೇ, ಎಲ್ಲರಲ್ಲೂ ನನ್ನದೊಂದು ಕಳಕಳಿಯ ಮನವಿ…….

ನೈತಿಕತೆ – ಸ್ವಾತಂತ್ರ್ಯ – ಕಾನೂನು – ವಾಸ್ತವ – ಭಾವನೆ – ಸತ್ಯ ಹೀಗೆ ಏನಾದರೂ ಇರಲಿ ಆದರೆ ಸಧ್ಯದ ಸ್ಥಿತಿಯಲ್ಲಿ ಅನೈತಿಕ ಸಂಬಂಧ ಆತ್ಮಹತ್ಯೆಗಿಂತಲೂ ಭೀಕರ. ಅದು ಸಾವಿನ ನಂತರವೂ ನಮ್ಮ ಕುಟುಂಬಗಳನ್ನು ಕಾಡುತ್ತದೆ. ಈ ಆಕರ್ಷಣೆಯನ್ನು ನಿಯಂತ್ರಿಸಿಕೊಳ್ಳಿ ಅಥವಾ ಕಾನೂನಿನ ಮುಖಾಂತರ ಅಧೀಕೃತ ಪರಿಹಾರ ಕಂಡುಕೊಳ್ಳಿ ಅಥವಾ ಕನಿಷ್ಠ ನಾಗರಿಕ ಪರಿಹಾರ ಹುಡುಕಿಕೊಳ್ಳಿ……

ಈ ರೀತಿಯ ಸಂಬಂಧ ಸೃಷ್ಟಿಸಿಕೊಳ್ಳುವ ಮೊದಲು ಸಾವಿರ ಸಲ ಯೋಚಿಸಿ. ಅತ್ಯಂತ ಕ್ರೂರ ರೀತಿಯಲ್ಲಿ ಸಾಯುವ ಸಾಧ್ಯತೆಯನ್ನು ನೆನಪಿಸಿಕೊಳ್ಳಿ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

18 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

20 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

2 days ago

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…

2 days ago

ರಘುನಾಥಪುರ ಬಳಿ ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…

2 days ago