ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ.
ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು.
ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ಕೊಲೆ ನಡೆದಿತ್ತು. ಕುರ್ಣೇಗಾಲದ ಜವರಪ್ಪ ಕೊಲೆಯಾಗಿದ್ದ ದುರ್ದೈವಿ.
ಏ.17ರಂದು ಕುರ್ಣೇಗಾಲ ಗ್ರಾಮದ ರಸ್ತೆ ಬದಿಯಲ್ಲಿ ವ್ಯಕ್ತಿ ಶವ ಅನುಮಾನಸ್ಪ ರೀತಿಯಲ್ಲಿ ಪತ್ತೆಯಾಗಿತ್ತು. ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದರಿಂದ ತನಿಖೆ ನಡೆಸುವಂತೆ ದೂರು ದಾಖಲಾಗಿತ್ತು.
ತನಿಖೆ ವೇಳೆ ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಕೊಲೆಯಾಗಿರುವುದು ಕಂಡುಬಂದಿದೆ. ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಅಂತಾ ಆರೋಪಿಗಳು ಕೊಲೆ ಪ್ಲಾನ್ ಮಾಡಿದ್ದರು.
ಅಮೃತಾ ಕುಮ್ಮಕ್ಕಿನಿಂದ ಪ್ರಿಯಕರನಿಂದ ಜವರಪ್ಪನ ಕೊಲೆಯಾಗಿದೆ. ಪೊಲೀಸರ ತನಿಖೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಆಗಾಗ್ಗೆ ಗಲಾಟೆ ಆಗುತ್ತಿತ್ತು.
12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ತವರಿಗೆ ಹೋಗಿದ್ದ ಅಮೃತಾ, ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಆದರೆ ಮನೆಗೆ ವಾಪಸ್ ಆಗಿರಲಿಲ್ಲ. ಮಾರನೇ ದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಯಾರೋ ಕೊಲೆ ಮಾಡಿದ್ದಾರೆಂದು ದೂರು ದಾಖಲು ಮಾಡಿದ್ದ ಜವರಪ್ಪ ಸಹೋದರ ರವಿ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…