ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ.
ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು.
ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ಕೊಲೆ ನಡೆದಿತ್ತು. ಕುರ್ಣೇಗಾಲದ ಜವರಪ್ಪ ಕೊಲೆಯಾಗಿದ್ದ ದುರ್ದೈವಿ.
ಏ.17ರಂದು ಕುರ್ಣೇಗಾಲ ಗ್ರಾಮದ ರಸ್ತೆ ಬದಿಯಲ್ಲಿ ವ್ಯಕ್ತಿ ಶವ ಅನುಮಾನಸ್ಪ ರೀತಿಯಲ್ಲಿ ಪತ್ತೆಯಾಗಿತ್ತು. ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದರಿಂದ ತನಿಖೆ ನಡೆಸುವಂತೆ ದೂರು ದಾಖಲಾಗಿತ್ತು.
ತನಿಖೆ ವೇಳೆ ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಕೊಲೆಯಾಗಿರುವುದು ಕಂಡುಬಂದಿದೆ. ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಅಂತಾ ಆರೋಪಿಗಳು ಕೊಲೆ ಪ್ಲಾನ್ ಮಾಡಿದ್ದರು.
ಅಮೃತಾ ಕುಮ್ಮಕ್ಕಿನಿಂದ ಪ್ರಿಯಕರನಿಂದ ಜವರಪ್ಪನ ಕೊಲೆಯಾಗಿದೆ. ಪೊಲೀಸರ ತನಿಖೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಆಗಾಗ್ಗೆ ಗಲಾಟೆ ಆಗುತ್ತಿತ್ತು.
12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ತವರಿಗೆ ಹೋಗಿದ್ದ ಅಮೃತಾ, ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಆದರೆ ಮನೆಗೆ ವಾಪಸ್ ಆಗಿರಲಿಲ್ಲ. ಮಾರನೇ ದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಯಾರೋ ಕೊಲೆ ಮಾಡಿದ್ದಾರೆಂದು ದೂರು ದಾಖಲು ಮಾಡಿದ್ದ ಜವರಪ್ಪ ಸಹೋದರ ರವಿ.
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…
ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…
ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…
ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…