ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ.
ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು.
ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ಕೊಲೆ ನಡೆದಿತ್ತು. ಕುರ್ಣೇಗಾಲದ ಜವರಪ್ಪ ಕೊಲೆಯಾಗಿದ್ದ ದುರ್ದೈವಿ.
ಏ.17ರಂದು ಕುರ್ಣೇಗಾಲ ಗ್ರಾಮದ ರಸ್ತೆ ಬದಿಯಲ್ಲಿ ವ್ಯಕ್ತಿ ಶವ ಅನುಮಾನಸ್ಪ ರೀತಿಯಲ್ಲಿ ಪತ್ತೆಯಾಗಿತ್ತು. ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದರಿಂದ ತನಿಖೆ ನಡೆಸುವಂತೆ ದೂರು ದಾಖಲಾಗಿತ್ತು.
ತನಿಖೆ ವೇಳೆ ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಕೊಲೆಯಾಗಿರುವುದು ಕಂಡುಬಂದಿದೆ. ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಅಂತಾ ಆರೋಪಿಗಳು ಕೊಲೆ ಪ್ಲಾನ್ ಮಾಡಿದ್ದರು.
ಅಮೃತಾ ಕುಮ್ಮಕ್ಕಿನಿಂದ ಪ್ರಿಯಕರನಿಂದ ಜವರಪ್ಪನ ಕೊಲೆಯಾಗಿದೆ. ಪೊಲೀಸರ ತನಿಖೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಆಗಾಗ್ಗೆ ಗಲಾಟೆ ಆಗುತ್ತಿತ್ತು.
12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ತವರಿಗೆ ಹೋಗಿದ್ದ ಅಮೃತಾ, ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಆದರೆ ಮನೆಗೆ ವಾಪಸ್ ಆಗಿರಲಿಲ್ಲ. ಮಾರನೇ ದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಯಾರೋ ಕೊಲೆ ಮಾಡಿದ್ದಾರೆಂದು ದೂರು ದಾಖಲು ಮಾಡಿದ್ದ ಜವರಪ್ಪ ಸಹೋದರ ರವಿ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…