ಯೆಸ್, ಈ ಘಟನೆ ಕಳೆದ ಶನಿವಾರ ಗೌರಿಬಿದನೂರಿನ ಕೊನಗಾನಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸುಮಾರು 40 ವರ್ಷದ ಅಲುವೇಲಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಸಂಜೀವಪ್ಪ ಎಂಬಾತ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿ. ರಾಮಾಂಜಿನಮ್ಮ ಎಂಬಾಕೆ ಕೊಲೆ ಆರೋಪಿ ಸಂಜೀವಪ್ಪನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ.
ಕಳೆದ ಶನಿವಾರ ರಾಮಾಂಜಿನಮ್ಮ ಹಾಗೂ ಅಲುವೇಲಮ್ಮ ಇಬ್ಬರೂ ಜೊತೆಗೂಡಿ ಸಂಜೀವಪ್ಪ ಎಂಬಾತನ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ರಾಮಾಂಜಿನಮ್ಮ ಹಾಗೂ ಸಂಜೀವಪ್ಪ ಇಬ್ಬರೂ ಸುಮಾರು 8 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎಂದು ತಿಳಿದು ಬಂದಿದ್ದು, ರಾಮಾಂಜಿನಮ್ಮನ ಮನೆಗೆ ಆಗಾಗ ಸಂಜೀವಪ್ಪ ಬಂದು ಹೋಗುತ್ತಿದ್ದ ಎಂಬುದು ಸ್ಥಳೀಯರ ಮಾತಾಗಿದೆ.
ಒಂದು ದಿನ ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ಜೊತೆಗೂಡಿ ಅಲುವೇಲಮ್ಮನವರನ್ನು ಕರೆದುಕೊಂಡು ಹೋಗಿ ಆಕೆಗೆ ಮದ್ಯ ಕುಡಿಸಿ, ಕುಡಿತದ ಅಮಲಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಕೊನಗಾನಹಳ್ಳಿಯಲ್ಲಿ ಅಲುವೇಲಮ್ಮ 3 ದಿನಗಳಿಂದ ಕಾಣಿಸಿಲ್ಲ ಎಂಬುದು ಬಹಿರಂಗವಾದಾಗ ರಾಮಾಂಜಿನಮ್ಮನ ಮೇಲೆ ಅನುಮಾನಗೊಂಡ ಗ್ರಾಮಸ್ಥರು ರಾಮಾಂಜಿನಮ್ಮಳನ್ನು ಮನೆಯಲ್ಲಿ ಕೂಡಿಹಾಕಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಅಲುವೇಲಮ್ಮ ಸಾವಿನ ವಿಚಾರ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಅಲುವೇಲಮ್ಮರಿಗೆ ಮದ್ಯ ಕುಡಿಸಿ, ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ರಾಮಾಂಜಿನಮ್ಮ ಎದುರಿನಲ್ಲಿಯೇ ಅತ್ಯಾಚಾರ ಮತ್ತು ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಇನ್ನಷ್ಟು ಸತ್ಯಾಂಶ ಪೊಲೀಸ್ ತನಿಖೆಯಿಂದ ಹೊರಬರಲಿದೆ.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…