ಯೆಸ್, ಈ ಘಟನೆ ಕಳೆದ ಶನಿವಾರ ಗೌರಿಬಿದನೂರಿನ ಕೊನಗಾನಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸುಮಾರು 40 ವರ್ಷದ ಅಲುವೇಲಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಸಂಜೀವಪ್ಪ ಎಂಬಾತ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿ. ರಾಮಾಂಜಿನಮ್ಮ ಎಂಬಾಕೆ ಕೊಲೆ ಆರೋಪಿ ಸಂಜೀವಪ್ಪನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ.
ಕಳೆದ ಶನಿವಾರ ರಾಮಾಂಜಿನಮ್ಮ ಹಾಗೂ ಅಲುವೇಲಮ್ಮ ಇಬ್ಬರೂ ಜೊತೆಗೂಡಿ ಸಂಜೀವಪ್ಪ ಎಂಬಾತನ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ರಾಮಾಂಜಿನಮ್ಮ ಹಾಗೂ ಸಂಜೀವಪ್ಪ ಇಬ್ಬರೂ ಸುಮಾರು 8 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎಂದು ತಿಳಿದು ಬಂದಿದ್ದು, ರಾಮಾಂಜಿನಮ್ಮನ ಮನೆಗೆ ಆಗಾಗ ಸಂಜೀವಪ್ಪ ಬಂದು ಹೋಗುತ್ತಿದ್ದ ಎಂಬುದು ಸ್ಥಳೀಯರ ಮಾತಾಗಿದೆ.
ಒಂದು ದಿನ ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ಜೊತೆಗೂಡಿ ಅಲುವೇಲಮ್ಮನವರನ್ನು ಕರೆದುಕೊಂಡು ಹೋಗಿ ಆಕೆಗೆ ಮದ್ಯ ಕುಡಿಸಿ, ಕುಡಿತದ ಅಮಲಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಕೊನಗಾನಹಳ್ಳಿಯಲ್ಲಿ ಅಲುವೇಲಮ್ಮ 3 ದಿನಗಳಿಂದ ಕಾಣಿಸಿಲ್ಲ ಎಂಬುದು ಬಹಿರಂಗವಾದಾಗ ರಾಮಾಂಜಿನಮ್ಮನ ಮೇಲೆ ಅನುಮಾನಗೊಂಡ ಗ್ರಾಮಸ್ಥರು ರಾಮಾಂಜಿನಮ್ಮಳನ್ನು ಮನೆಯಲ್ಲಿ ಕೂಡಿಹಾಕಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಅಲುವೇಲಮ್ಮ ಸಾವಿನ ವಿಚಾರ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಅಲುವೇಲಮ್ಮರಿಗೆ ಮದ್ಯ ಕುಡಿಸಿ, ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ರಾಮಾಂಜಿನಮ್ಮ ಎದುರಿನಲ್ಲಿಯೇ ಅತ್ಯಾಚಾರ ಮತ್ತು ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಇನ್ನಷ್ಟು ಸತ್ಯಾಂಶ ಪೊಲೀಸ್ ತನಿಖೆಯಿಂದ ಹೊರಬರಲಿದೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…