ಯೆಸ್, ಈ ಘಟನೆ ಕಳೆದ ಶನಿವಾರ ಗೌರಿಬಿದನೂರಿನ ಕೊನಗಾನಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸುಮಾರು 40 ವರ್ಷದ ಅಲುವೇಲಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಸಂಜೀವಪ್ಪ ಎಂಬಾತ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿ. ರಾಮಾಂಜಿನಮ್ಮ ಎಂಬಾಕೆ ಕೊಲೆ ಆರೋಪಿ ಸಂಜೀವಪ್ಪನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ.
ಕಳೆದ ಶನಿವಾರ ರಾಮಾಂಜಿನಮ್ಮ ಹಾಗೂ ಅಲುವೇಲಮ್ಮ ಇಬ್ಬರೂ ಜೊತೆಗೂಡಿ ಸಂಜೀವಪ್ಪ ಎಂಬಾತನ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ರಾಮಾಂಜಿನಮ್ಮ ಹಾಗೂ ಸಂಜೀವಪ್ಪ ಇಬ್ಬರೂ ಸುಮಾರು 8 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎಂದು ತಿಳಿದು ಬಂದಿದ್ದು, ರಾಮಾಂಜಿನಮ್ಮನ ಮನೆಗೆ ಆಗಾಗ ಸಂಜೀವಪ್ಪ ಬಂದು ಹೋಗುತ್ತಿದ್ದ ಎಂಬುದು ಸ್ಥಳೀಯರ ಮಾತಾಗಿದೆ.
ಒಂದು ದಿನ ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ಜೊತೆಗೂಡಿ ಅಲುವೇಲಮ್ಮನವರನ್ನು ಕರೆದುಕೊಂಡು ಹೋಗಿ ಆಕೆಗೆ ಮದ್ಯ ಕುಡಿಸಿ, ಕುಡಿತದ ಅಮಲಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಕೊನಗಾನಹಳ್ಳಿಯಲ್ಲಿ ಅಲುವೇಲಮ್ಮ 3 ದಿನಗಳಿಂದ ಕಾಣಿಸಿಲ್ಲ ಎಂಬುದು ಬಹಿರಂಗವಾದಾಗ ರಾಮಾಂಜಿನಮ್ಮನ ಮೇಲೆ ಅನುಮಾನಗೊಂಡ ಗ್ರಾಮಸ್ಥರು ರಾಮಾಂಜಿನಮ್ಮಳನ್ನು ಮನೆಯಲ್ಲಿ ಕೂಡಿಹಾಕಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಅಲುವೇಲಮ್ಮ ಸಾವಿನ ವಿಚಾರ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಅಲುವೇಲಮ್ಮರಿಗೆ ಮದ್ಯ ಕುಡಿಸಿ, ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ರಾಮಾಂಜಿನಮ್ಮ ಎದುರಿನಲ್ಲಿಯೇ ಅತ್ಯಾಚಾರ ಮತ್ತು ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಇನ್ನಷ್ಟು ಸತ್ಯಾಂಶ ಪೊಲೀಸ್ ತನಿಖೆಯಿಂದ ಹೊರಬರಲಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…