ಯೆಸ್, ಈ ಘಟನೆ ಕಳೆದ ಶನಿವಾರ ಗೌರಿಬಿದನೂರಿನ ಕೊನಗಾನಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸುಮಾರು 40 ವರ್ಷದ ಅಲುವೇಲಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಸಂಜೀವಪ್ಪ ಎಂಬಾತ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿ. ರಾಮಾಂಜಿನಮ್ಮ ಎಂಬಾಕೆ ಕೊಲೆ ಆರೋಪಿ ಸಂಜೀವಪ್ಪನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ.
ಕಳೆದ ಶನಿವಾರ ರಾಮಾಂಜಿನಮ್ಮ ಹಾಗೂ ಅಲುವೇಲಮ್ಮ ಇಬ್ಬರೂ ಜೊತೆಗೂಡಿ ಸಂಜೀವಪ್ಪ ಎಂಬಾತನ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ರಾಮಾಂಜಿನಮ್ಮ ಹಾಗೂ ಸಂಜೀವಪ್ಪ ಇಬ್ಬರೂ ಸುಮಾರು 8 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎಂದು ತಿಳಿದು ಬಂದಿದ್ದು, ರಾಮಾಂಜಿನಮ್ಮನ ಮನೆಗೆ ಆಗಾಗ ಸಂಜೀವಪ್ಪ ಬಂದು ಹೋಗುತ್ತಿದ್ದ ಎಂಬುದು ಸ್ಥಳೀಯರ ಮಾತಾಗಿದೆ.
ಒಂದು ದಿನ ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ಜೊತೆಗೂಡಿ ಅಲುವೇಲಮ್ಮನವರನ್ನು ಕರೆದುಕೊಂಡು ಹೋಗಿ ಆಕೆಗೆ ಮದ್ಯ ಕುಡಿಸಿ, ಕುಡಿತದ ಅಮಲಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಕೊನಗಾನಹಳ್ಳಿಯಲ್ಲಿ ಅಲುವೇಲಮ್ಮ 3 ದಿನಗಳಿಂದ ಕಾಣಿಸಿಲ್ಲ ಎಂಬುದು ಬಹಿರಂಗವಾದಾಗ ರಾಮಾಂಜಿನಮ್ಮನ ಮೇಲೆ ಅನುಮಾನಗೊಂಡ ಗ್ರಾಮಸ್ಥರು ರಾಮಾಂಜಿನಮ್ಮಳನ್ನು ಮನೆಯಲ್ಲಿ ಕೂಡಿಹಾಕಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಅಲುವೇಲಮ್ಮ ಸಾವಿನ ವಿಚಾರ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಅಲುವೇಲಮ್ಮರಿಗೆ ಮದ್ಯ ಕುಡಿಸಿ, ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ರಾಮಾಂಜಿನಮ್ಮ ಎದುರಿನಲ್ಲಿಯೇ ಅತ್ಯಾಚಾರ ಮತ್ತು ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಇನ್ನಷ್ಟು ಸತ್ಯಾಂಶ ಪೊಲೀಸ್ ತನಿಖೆಯಿಂದ ಹೊರಬರಲಿದೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…