ಯೆಸ್, ಈ ಘಟನೆ ಕಳೆದ ಶನಿವಾರ ಗೌರಿಬಿದನೂರಿನ ಕೊನಗಾನಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸುಮಾರು 40 ವರ್ಷದ ಅಲುವೇಲಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಸಂಜೀವಪ್ಪ ಎಂಬಾತ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿ. ರಾಮಾಂಜಿನಮ್ಮ ಎಂಬಾಕೆ ಕೊಲೆ ಆರೋಪಿ ಸಂಜೀವಪ್ಪನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ.
ಕಳೆದ ಶನಿವಾರ ರಾಮಾಂಜಿನಮ್ಮ ಹಾಗೂ ಅಲುವೇಲಮ್ಮ ಇಬ್ಬರೂ ಜೊತೆಗೂಡಿ ಸಂಜೀವಪ್ಪ ಎಂಬಾತನ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ರಾಮಾಂಜಿನಮ್ಮ ಹಾಗೂ ಸಂಜೀವಪ್ಪ ಇಬ್ಬರೂ ಸುಮಾರು 8 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎಂದು ತಿಳಿದು ಬಂದಿದ್ದು, ರಾಮಾಂಜಿನಮ್ಮನ ಮನೆಗೆ ಆಗಾಗ ಸಂಜೀವಪ್ಪ ಬಂದು ಹೋಗುತ್ತಿದ್ದ ಎಂಬುದು ಸ್ಥಳೀಯರ ಮಾತಾಗಿದೆ.
ಒಂದು ದಿನ ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ಜೊತೆಗೂಡಿ ಅಲುವೇಲಮ್ಮನವರನ್ನು ಕರೆದುಕೊಂಡು ಹೋಗಿ ಆಕೆಗೆ ಮದ್ಯ ಕುಡಿಸಿ, ಕುಡಿತದ ಅಮಲಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಕೊನಗಾನಹಳ್ಳಿಯಲ್ಲಿ ಅಲುವೇಲಮ್ಮ 3 ದಿನಗಳಿಂದ ಕಾಣಿಸಿಲ್ಲ ಎಂಬುದು ಬಹಿರಂಗವಾದಾಗ ರಾಮಾಂಜಿನಮ್ಮನ ಮೇಲೆ ಅನುಮಾನಗೊಂಡ ಗ್ರಾಮಸ್ಥರು ರಾಮಾಂಜಿನಮ್ಮಳನ್ನು ಮನೆಯಲ್ಲಿ ಕೂಡಿಹಾಕಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಅಲುವೇಲಮ್ಮ ಸಾವಿನ ವಿಚಾರ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಅಲುವೇಲಮ್ಮರಿಗೆ ಮದ್ಯ ಕುಡಿಸಿ, ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ರಾಮಾಂಜಿನಮ್ಮ ಎದುರಿನಲ್ಲಿಯೇ ಅತ್ಯಾಚಾರ ಮತ್ತು ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಇನ್ನಷ್ಟು ಸತ್ಯಾಂಶ ಪೊಲೀಸ್ ತನಿಖೆಯಿಂದ ಹೊರಬರಲಿದೆ.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…