ಅನೈತಿಕ‌ ಸಂಬಂಧ ಹೊಂದಿದ್ದ ಮಹಿಳೆ ಎದುರೇ ನಡೀತು ಮತ್ತೊಬ್ಬಾಕೆಯ ಅತ್ಯಾಚಾರ, ಕೊಲೆ…! ಇಷ್ಟಕ್ಕೂ ಆ ಕಾಮುಕ‌ ಯಾರು? ಎಲ್ಲಿ ಘಟನೆ ನಡೀತು ಎಂಬ ಸ್ಟೋರಿ‌ ಇಲ್ಲಿದೆ ನೋಡಿ…

ತನ್ನ ಕಾಮದ ತೀಟೆಯನ್ನು ತೀರಿಸಿಕೊಳ್ಳಲು ಪರಿಚಯಸ್ಥ ಮಹಿಳೆ ಜೊತೆ ಈಗಾಗಲೇ ಅನೈತಿಕ ಸಂಬಂಧ ಹೊಂದಿದ್ದ. ಇಷ್ಟಕ್ಕೆ ಸುಮ್ಮನಾಗದ ಈತ ಮತ್ತೊಬ್ಬ ಹೆಂಗಸಿನ ಮೇಲೆ ಕಣ್ಣು ಇಟ್ಟಿದ್ದ. ಈ ಕಾಮುಕನ ಬಳಿ ಕೂಲಿ ಕೆಲಸಕ್ಕೆಂದು ಬಂದಿದ್ದ ಮಹಿಳೆಗೆ ಮದ್ಯ ಕುಡಿಸಿ ಈಗಾಗಲೇ ಆತನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಎದುರೇ ಬೇಡ ಬೇಡ ಅಂದರೂ ಅತ್ಯಾಚಾರ ಎಸಗಿ ಕೊಲೆ ಮಾಡಿ ಕ್ರೌರ್ಯ ಮೆರೆದ ಪಾಪಿ..

ಯೆಸ್, ಈ ಘಟನೆ ಕಳೆದ ಶನಿವಾರ ಗೌರಿಬಿದನೂರಿನ ಕೊನಗಾನಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸುಮಾರು 40 ವರ್ಷದ ಅಲುವೇಲಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಸಂಜೀವಪ್ಪ ಎಂಬಾತ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿ. ರಾಮಾಂಜಿನಮ್ಮ ಎಂಬಾಕೆ ಕೊಲೆ ಆರೋಪಿ ಸಂಜೀವಪ್ಪನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ.

ಕಳೆದ ಶನಿವಾರ ರಾಮಾಂಜಿನಮ್ಮ ಹಾಗೂ ಅಲುವೇಲಮ್ಮ ಇಬ್ಬರೂ ಜೊತೆಗೂಡಿ ಸಂಜೀವಪ್ಪ ಎಂಬಾತನ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ರಾಮಾಂಜಿನಮ್ಮ ಹಾಗೂ ಸಂಜೀವಪ್ಪ ಇಬ್ಬರೂ ಸುಮಾರು 8 ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎಂದು ತಿಳಿದು ಬಂದಿದ್ದು, ರಾಮಾಂಜಿನಮ್ಮನ ಮನೆಗೆ ಆಗಾಗ ಸಂಜೀವಪ್ಪ ಬಂದು ಹೋಗುತ್ತಿದ್ದ ಎಂಬುದು ಸ್ಥಳೀಯರ ಮಾತಾಗಿದೆ.

ಒಂದು ದಿನ ಸಂಜೀವಪ್ಪ ಹಾಗೂ ರಾಮಾಂಜಿನಮ್ಮ ಜೊತೆಗೂಡಿ ಅಲುವೇಲಮ್ಮನವರನ್ನು ಕರೆದುಕೊಂಡು ಹೋಗಿ ಆಕೆಗೆ ಮದ್ಯ ಕುಡಿಸಿ, ಕುಡಿತದ ಅಮಲಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

ಕೊನಗಾನಹಳ್ಳಿಯಲ್ಲಿ ಅಲುವೇಲಮ್ಮ 3 ದಿನಗಳಿಂದ ಕಾಣಿಸಿಲ್ಲ ಎಂಬುದು ಬಹಿರಂಗವಾದಾಗ ರಾಮಾಂಜಿನಮ್ಮನ ಮೇಲೆ ಅನುಮಾನಗೊಂಡ ಗ್ರಾಮಸ್ಥರು ರಾಮಾಂಜಿನಮ್ಮಳನ್ನು ಮನೆಯಲ್ಲಿ ಕೂಡಿಹಾಕಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಅಲುವೇಲಮ್ಮ ಸಾವಿನ ವಿಚಾರ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನು ಅಲುವೇಲಮ್ಮರಿಗೆ ಮದ್ಯ ಕುಡಿಸಿ, ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ರಾಮಾಂಜಿನಮ್ಮ ಎದುರಿನಲ್ಲಿಯೇ ಅತ್ಯಾಚಾರ ಮತ್ತು ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಇನ್ನಷ್ಟು ಸತ್ಯಾಂಶ ಪೊಲೀಸ್ ತನಿಖೆಯಿಂದ ಹೊರಬರಲಿದೆ.

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

1 hour ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

5 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

20 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

20 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

21 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

22 hours ago