Categories: ಕೋಲಾರ

ಅನೈತಿಕ ಹಾಗೂ ಹಣಕಾಸು ಭ್ರಷ್ಟಾಚಾರ ಎಸ್ಎಫ್ಐ ನಿಂದ ವಾಸುದೇವರೆಡ್ಡಿ ಉಚ್ಚಾಟನೆ-ಎಸ್ಎಫ್ಐ ರಾಜ್ಯ ಅಧ್ಯಕ್ಷ ಅಮರೇಶ್ ಕಡಗದ್

ಕೋಲಾರ: ಅನೈತಿಕ ಮತ್ತು ಹಣಕಾಸು ಭ್ರಷ್ಟಾಚಾರದ ಆರೋಪದ ಮೇಲೆ ಕಳೆದ ವರ್ಷವೇ ವಾಸುದೇವರೆಡ್ಡಿ ಅವರನ್ನು ರಾಜ್ಯ ಕಾರ್ಯದರ್ಶಿಯಿಂದ ಉಚ್ಚಾಟನೆ ಮಾಡಲಾಗಿದ್ದು, ಕಾರ್ಯಕರ್ತರು ಹಾಗೂ ಹಿತೈಷಿಗಳು ಗೊಂದಲಗೊಳ್ಳದೇ ಎಚ್ಚರ ವಹಿಸಬೇಕು ಎಂದು ಎಸ್ಎಫ್ಐ ರಾಜ್ಯ ಅಧ್ಯಕ್ಷ ಅಮರೇಶ್ ಕಡಗದ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಸುದೇವರೆಡ್ಡಿ ಮೇಲೆ ಆರೋಪಗಳು ಕೇಳಿ ಬಂದ ತಕ್ಷಣವೇ ಅವರನ್ನು ಎಸ್ಎಫ್ಐ ಸಂಘಟನೆಯಿಂದ ಕೈ ಬಿಟ್ಟು ಅವರ ವಿರುದ್ದ ಸಂಘಟನೆಯ ಆಂತರಿಕ ತನಿಖೆಯಿಂದ ಸಹ ದೃಢವಾಗಿದೆ ಎಸ್ಎಫ್ಐ ಸಂಘಟನೆಯ ಹಿತೈಷಿಗಳು ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಹುಟ್ಟು ಮಾಡಿ ಅವರನ್ನು ದಾರಿ ತಪ್ಪಿಸಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ವಾಸುದೇವರೆಡ್ಡಿ ಅವರ ವಿಚಾರದಲ್ಲೂ ಯಾರು ಬೆಂಬಲಿಸಬಾರದು ಎಂದರು.

ವಾಸುದೇವರೆಡ್ಡಿ ಅವರು ಸಂಘಟನೆಯಲ್ಲಿ ಇದ್ದಷ್ಟು ದಿನವು ಸಂಘಟನೆಯ ನಿಲುವುಗಳಿಗೆ ವಿರುದ್ದವಾಗಿಯೇ ಇದ್ದರು ಸಂಘಟನೆಯಿಂದ ಕೈ ಬಿಟ್ಟ ನಂತರ ಅವರು ಕಾಂಗ್ರೆಸ್ ಪಕ್ಷದ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಎಸ್ಎಫ್ಐ ಸಂಘಟನೆಯ ಯುವಜನರ ಸಂಪರ್ಕ ಬಳಸಿಕೊಳ್ಳಲು ಹೊರಟಿದ್ದಾರೆ ಅವರಿಗೂ ಎಸ್ಎಫ್ಐ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಅವರನ್ನು ಯಾವುದೇ ಕಾರಣಕ್ಕೂ ಬೆಂಬಲಿಸಬಾರದು ಎಂದು ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಭೀಮನಗೌಡ, ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ, ಜಿಲ್ಲಾ ಮುಖಂಡ ಶಶಿಕುಮಾರ್ ಇದ್ದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

7 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

8 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

9 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

9 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

10 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

18 hours ago