Categories: ಕೋಲಾರ

ಅನೈತಿಕ ಹಾಗೂ ಹಣಕಾಸು ಭ್ರಷ್ಟಾಚಾರ ಎಸ್ಎಫ್ಐ ನಿಂದ ವಾಸುದೇವರೆಡ್ಡಿ ಉಚ್ಚಾಟನೆ-ಎಸ್ಎಫ್ಐ ರಾಜ್ಯ ಅಧ್ಯಕ್ಷ ಅಮರೇಶ್ ಕಡಗದ್

ಕೋಲಾರ: ಅನೈತಿಕ ಮತ್ತು ಹಣಕಾಸು ಭ್ರಷ್ಟಾಚಾರದ ಆರೋಪದ ಮೇಲೆ ಕಳೆದ ವರ್ಷವೇ ವಾಸುದೇವರೆಡ್ಡಿ ಅವರನ್ನು ರಾಜ್ಯ ಕಾರ್ಯದರ್ಶಿಯಿಂದ ಉಚ್ಚಾಟನೆ ಮಾಡಲಾಗಿದ್ದು, ಕಾರ್ಯಕರ್ತರು ಹಾಗೂ ಹಿತೈಷಿಗಳು ಗೊಂದಲಗೊಳ್ಳದೇ ಎಚ್ಚರ ವಹಿಸಬೇಕು ಎಂದು ಎಸ್ಎಫ್ಐ ರಾಜ್ಯ ಅಧ್ಯಕ್ಷ ಅಮರೇಶ್ ಕಡಗದ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಸುದೇವರೆಡ್ಡಿ ಮೇಲೆ ಆರೋಪಗಳು ಕೇಳಿ ಬಂದ ತಕ್ಷಣವೇ ಅವರನ್ನು ಎಸ್ಎಫ್ಐ ಸಂಘಟನೆಯಿಂದ ಕೈ ಬಿಟ್ಟು ಅವರ ವಿರುದ್ದ ಸಂಘಟನೆಯ ಆಂತರಿಕ ತನಿಖೆಯಿಂದ ಸಹ ದೃಢವಾಗಿದೆ ಎಸ್ಎಫ್ಐ ಸಂಘಟನೆಯ ಹಿತೈಷಿಗಳು ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಹುಟ್ಟು ಮಾಡಿ ಅವರನ್ನು ದಾರಿ ತಪ್ಪಿಸಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ವಾಸುದೇವರೆಡ್ಡಿ ಅವರ ವಿಚಾರದಲ್ಲೂ ಯಾರು ಬೆಂಬಲಿಸಬಾರದು ಎಂದರು.

ವಾಸುದೇವರೆಡ್ಡಿ ಅವರು ಸಂಘಟನೆಯಲ್ಲಿ ಇದ್ದಷ್ಟು ದಿನವು ಸಂಘಟನೆಯ ನಿಲುವುಗಳಿಗೆ ವಿರುದ್ದವಾಗಿಯೇ ಇದ್ದರು ಸಂಘಟನೆಯಿಂದ ಕೈ ಬಿಟ್ಟ ನಂತರ ಅವರು ಕಾಂಗ್ರೆಸ್ ಪಕ್ಷದ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಎಸ್ಎಫ್ಐ ಸಂಘಟನೆಯ ಯುವಜನರ ಸಂಪರ್ಕ ಬಳಸಿಕೊಳ್ಳಲು ಹೊರಟಿದ್ದಾರೆ ಅವರಿಗೂ ಎಸ್ಎಫ್ಐ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಅವರನ್ನು ಯಾವುದೇ ಕಾರಣಕ್ಕೂ ಬೆಂಬಲಿಸಬಾರದು ಎಂದು ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಭೀಮನಗೌಡ, ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ, ಜಿಲ್ಲಾ ಮುಖಂಡ ಶಶಿಕುಮಾರ್ ಇದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago