ಅನ್ನದಾತರದ್ದು ಬೇಡುವ ಕೈಗಳಲ್ಲ, ಅನ್ನ ನೀಡುವ ಕೈಗಳು-ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ

ಅನ್ನದಾತರದ್ದು ಬೇಡುವ ಕೈಗಳಲ್ಲ. ಅವು ಹಸಿದು ಬಂದವರಿಗೆ ಅನ್ನ ನೀಡುವ ಕೈಗಳಾಗಿವೆ. ರೈತ ಸಮುದಾಯ ಒಗ್ಗಟ್ಟಾಗಿ ಮುನ್ನೆಡೆದರೆ ಯಾವತ್ತಿಗೂ ಸೋಲಿಲ್ಲ ಎಂದು ಪ್ರಗತಿಪರ ರೈತ ಮಹಿಳೆ, ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ ಹೇಳಿದರು.

ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಜಿಲ್ಲಾ ಸಹಕಾರ ಒಕ್ಕೂಟ, ಬಮೂಲ್ ವತಿಯಿಂದ ಶುಕ್ರವಾರ ಡೇರಿಗಳ ಕಾರ್ಯದರ್ಶಿ, ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಎಂದೂ ಬೇಡುವುದಿಲ್ಲ, ಅವರಿಗೆ ಕೊಡುವುದು ಮಾತ್ರ ಗೊತ್ತಿದೆ. ಹಾಗಾಗಿ ರೈತರು ಕೊಡುಗೈದಾನಿಗಳಾಗಿದ್ದಾರೆ. ರೈತರು ಯಾವುದೇ ಸಂದರ್ಭದಲ್ಲೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಹವಾಮಾನಾಧಾರಿತವಾದ ಬೆಳೆಗಳು ಎಂದಿಗೂ ರೈತರನ್ನು ಕೈ ಬಿಡುವುದಿಲ್ಲ. ಇರುವ ಜಾಗದಲ್ಲಿಯೇ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಒಂದಕ್ಕೊಂದು ಪೂರಕವಾದ ಬೆಳೆಗಳನ್ನು ಬೆಳೆಯಬೇಕು. ಅದಕ್ಕೆ ತಕ್ಕಂತೆ ಮಾರುಕಟ್ಟೆಯನ್ನು ಕಲ್ಪಿಸಿಕೊಳ್ಳುವ ಜಾಣ್ಮೆಯೂ ಇರಬೇಕಾಗುತ್ತದೆ ಎಂದು ಸಲಹೆ ನೀಡಿದರು. ಶ್ರೀಗಂಧ ಬೆಳೆಯಲು ಇಡೀ ದೇಶದಲ್ಲಿಯೇ ನಮ್ಮ ರಾಜ್ಯದಲ್ಲಿ ಅತ್ಯುತ್ತಮ ವಾತಾವರಣ ಇದೆ. ಇಂತಹ ಸದುಪಯೋಗ ಬಳಸಿಕೊಂಡು ಶ್ರೀಗಂಧ ಬೆಳೆದು ರೈತರು ಆರ್ಥಿಕವಾಗಿ ವೃದ್ಧಿಯಾಗಬೇಕು. ರೈತರು ಭೂಮಿಯನ್ನು ನಂಬಿದರೆ ಆರ್ಥಿಕ ಸ್ಥಾನಮಾನ ವೃದ್ಧಿಸಿಕೊಂಡು, ಉತ್ತಮ ಜೀವನ ಮಾಡಬಹುದು. ಹಸಿರು ಕ್ರಾಂತಿಯನ್ನು ಮಾಡುವ ಶಕ್ತಿ ಇರುವುದು ರೈತರಿಗೆ ಮಾತ್ರ ಎಂದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ ಯಾವುದೇ ಔದ್ಯೋಗಿಕ ಕ್ಷೇತ್ರಕ್ಕೆ ಪೆಟ್ಟು ಬಿದ್ದರೂ ರೈತರು ಬೆಳೆದ ಬೆಳೆಗಳ ಮೇಲೆ ಪರಿಣಾಮ ಬೀರಿ, ಬೆಲೆಗಳ ಮೇಲೆ ಪ್ರಭಾವ ಬೀರುತ್ತದೆ. ಅತಿವೃಷ್ಟಿ, ಅನಾವೃಷ್ಠಿ ಯಾವುದೇ ಸಮಸ್ಯೆ ಬಂದರೂ ಎದೆಗುಂದರೆ ಜೀವನ ಮಾಡುವ ಶಕ್ತಿ ರೈತರಿಗೆ ಮಾತ್ರ ಇದೆ ಎಂದರು.

ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ ನಮ್ಮದು ಕೃಷಿ ಪ್ರಧಾನ ದೇಶವಾಗಿದ್ದರೂ ಹಲವು ವೈವಿಧ್ಯತೆಗಳನ್ನು ಒಳಗೊಂಡಿದೆ. ಅದರಲ್ಲಿ ಕೃಷಿಕರು ರಾಷ್ಟ್ರದ ಬೆನ್ನೆಲುಬು ಆಗಿದ್ದಾರೆ. ರೈತರು ನೆಮ್ಮದಿಯಿಂದ ಇದ್ದರೆ ದೇಶವು ಸಮೃದ್ಧವಾಗಿರಲಿದೆ. ರೈತ ಕುಟುಂಬಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಶಿಬಿರ ಆಯೋಜನೆ ಮಾಡಲಾಗಿದೆ. ವ್ಯವಸಾಯ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ದುರದೃಷ್ಟಕರ ಎಂದರು.

ಟಿಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಮಾತನಾಡಿ ಕೃಷಿಯನ್ನು ಶ್ರದ್ಧೆಯಿಂದ ಮಾಡಿದರೆ ಕೇವಲ ಒಂದು ಎಕರೆಯಲ್ಲಿ ಲಕ್ಷಾಂತರ ಹಣ ಸಂಪಾದನೆ ಮಾಡಬಹುದು. ಒಬ್ಬ ಕಾರ್ಯದರ್ಶಿ ಇಡೀ ಗ್ರಾಮವನ್ನೇ ಬದಲಾಯಿಸಬಹುದು ಎಂದರು.

ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ಟಿಎಪಿಎಂಸಿ ಅಧ್ಯಕ್ಷ ಆಂಜನಗೌಡ, ಜಿಲ್ಲಾ ಸಹಕಾರಿ ಸಂಘದ ಉಪಾಧ್ಯಕ್ಷ ಬಿಟಿ ಶ್ರೀನಿವಾಸ, ಬಿಸಿ ನಾಗರಾಜು, ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ರೈತರು ಇದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 hour ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

2 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

7 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

9 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

11 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

12 hours ago