ಅನ್ನದಾತರದ್ದು ಬೇಡುವ ಕೈಗಳಲ್ಲ, ಅನ್ನ ನೀಡುವ ಕೈಗಳು-ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ

ಅನ್ನದಾತರದ್ದು ಬೇಡುವ ಕೈಗಳಲ್ಲ. ಅವು ಹಸಿದು ಬಂದವರಿಗೆ ಅನ್ನ ನೀಡುವ ಕೈಗಳಾಗಿವೆ. ರೈತ ಸಮುದಾಯ ಒಗ್ಗಟ್ಟಾಗಿ ಮುನ್ನೆಡೆದರೆ ಯಾವತ್ತಿಗೂ ಸೋಲಿಲ್ಲ ಎಂದು ಪ್ರಗತಿಪರ ರೈತ ಮಹಿಳೆ, ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ ಹೇಳಿದರು.

ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಜಿಲ್ಲಾ ಸಹಕಾರ ಒಕ್ಕೂಟ, ಬಮೂಲ್ ವತಿಯಿಂದ ಶುಕ್ರವಾರ ಡೇರಿಗಳ ಕಾರ್ಯದರ್ಶಿ, ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಎಂದೂ ಬೇಡುವುದಿಲ್ಲ, ಅವರಿಗೆ ಕೊಡುವುದು ಮಾತ್ರ ಗೊತ್ತಿದೆ. ಹಾಗಾಗಿ ರೈತರು ಕೊಡುಗೈದಾನಿಗಳಾಗಿದ್ದಾರೆ. ರೈತರು ಯಾವುದೇ ಸಂದರ್ಭದಲ್ಲೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಹವಾಮಾನಾಧಾರಿತವಾದ ಬೆಳೆಗಳು ಎಂದಿಗೂ ರೈತರನ್ನು ಕೈ ಬಿಡುವುದಿಲ್ಲ. ಇರುವ ಜಾಗದಲ್ಲಿಯೇ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಒಂದಕ್ಕೊಂದು ಪೂರಕವಾದ ಬೆಳೆಗಳನ್ನು ಬೆಳೆಯಬೇಕು. ಅದಕ್ಕೆ ತಕ್ಕಂತೆ ಮಾರುಕಟ್ಟೆಯನ್ನು ಕಲ್ಪಿಸಿಕೊಳ್ಳುವ ಜಾಣ್ಮೆಯೂ ಇರಬೇಕಾಗುತ್ತದೆ ಎಂದು ಸಲಹೆ ನೀಡಿದರು. ಶ್ರೀಗಂಧ ಬೆಳೆಯಲು ಇಡೀ ದೇಶದಲ್ಲಿಯೇ ನಮ್ಮ ರಾಜ್ಯದಲ್ಲಿ ಅತ್ಯುತ್ತಮ ವಾತಾವರಣ ಇದೆ. ಇಂತಹ ಸದುಪಯೋಗ ಬಳಸಿಕೊಂಡು ಶ್ರೀಗಂಧ ಬೆಳೆದು ರೈತರು ಆರ್ಥಿಕವಾಗಿ ವೃದ್ಧಿಯಾಗಬೇಕು. ರೈತರು ಭೂಮಿಯನ್ನು ನಂಬಿದರೆ ಆರ್ಥಿಕ ಸ್ಥಾನಮಾನ ವೃದ್ಧಿಸಿಕೊಂಡು, ಉತ್ತಮ ಜೀವನ ಮಾಡಬಹುದು. ಹಸಿರು ಕ್ರಾಂತಿಯನ್ನು ಮಾಡುವ ಶಕ್ತಿ ಇರುವುದು ರೈತರಿಗೆ ಮಾತ್ರ ಎಂದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ ಯಾವುದೇ ಔದ್ಯೋಗಿಕ ಕ್ಷೇತ್ರಕ್ಕೆ ಪೆಟ್ಟು ಬಿದ್ದರೂ ರೈತರು ಬೆಳೆದ ಬೆಳೆಗಳ ಮೇಲೆ ಪರಿಣಾಮ ಬೀರಿ, ಬೆಲೆಗಳ ಮೇಲೆ ಪ್ರಭಾವ ಬೀರುತ್ತದೆ. ಅತಿವೃಷ್ಟಿ, ಅನಾವೃಷ್ಠಿ ಯಾವುದೇ ಸಮಸ್ಯೆ ಬಂದರೂ ಎದೆಗುಂದರೆ ಜೀವನ ಮಾಡುವ ಶಕ್ತಿ ರೈತರಿಗೆ ಮಾತ್ರ ಇದೆ ಎಂದರು.

ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ ನಮ್ಮದು ಕೃಷಿ ಪ್ರಧಾನ ದೇಶವಾಗಿದ್ದರೂ ಹಲವು ವೈವಿಧ್ಯತೆಗಳನ್ನು ಒಳಗೊಂಡಿದೆ. ಅದರಲ್ಲಿ ಕೃಷಿಕರು ರಾಷ್ಟ್ರದ ಬೆನ್ನೆಲುಬು ಆಗಿದ್ದಾರೆ. ರೈತರು ನೆಮ್ಮದಿಯಿಂದ ಇದ್ದರೆ ದೇಶವು ಸಮೃದ್ಧವಾಗಿರಲಿದೆ. ರೈತ ಕುಟುಂಬಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಶಿಬಿರ ಆಯೋಜನೆ ಮಾಡಲಾಗಿದೆ. ವ್ಯವಸಾಯ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ದುರದೃಷ್ಟಕರ ಎಂದರು.

ಟಿಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಮಾತನಾಡಿ ಕೃಷಿಯನ್ನು ಶ್ರದ್ಧೆಯಿಂದ ಮಾಡಿದರೆ ಕೇವಲ ಒಂದು ಎಕರೆಯಲ್ಲಿ ಲಕ್ಷಾಂತರ ಹಣ ಸಂಪಾದನೆ ಮಾಡಬಹುದು. ಒಬ್ಬ ಕಾರ್ಯದರ್ಶಿ ಇಡೀ ಗ್ರಾಮವನ್ನೇ ಬದಲಾಯಿಸಬಹುದು ಎಂದರು.

ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ಟಿಎಪಿಎಂಸಿ ಅಧ್ಯಕ್ಷ ಆಂಜನಗೌಡ, ಜಿಲ್ಲಾ ಸಹಕಾರಿ ಸಂಘದ ಉಪಾಧ್ಯಕ್ಷ ಬಿಟಿ ಶ್ರೀನಿವಾಸ, ಬಿಸಿ ನಾಗರಾಜು, ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ರೈತರು ಇದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

1 hour ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago