ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ, ವಯೋವೃದ್ಧರಿಗೆ ಹೊದಿಕೆ ಹಾಗೂ ವಸ್ತ್ರವಿತರಣೆ ಜೊತೆಗೆ ನಿರಾಶ್ರಿತ ಕಡುಬಡವರಿಗೆ ಅನ್ನದಾಸೋಹ ಮಾಡುವ ಮೂಲಕ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದರು.
ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ತಮ್ಮ ನೆಚ್ಚಿನ ನಾಯಕರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು
ಈ ವೇಳೆ ಕಾರ್ಯಕ್ರಮದಲ್ಲಿ ದಾನಿಗಳಾದ ಬಿಡಿಗೆರೆ ರವಿಕುಮಾರ್ ಮಾತನಾಡಿ 2319 ದಿನಗಳಿಂದ ನಿರಂತರವಾಗಿ ಆಹಾರ ವಿತರಣೆ ಮಾಡುವ ಮೂಲಕ ಹಸಿವು ನೀಗಿಸುವ ಕಾರ್ಯವನ್ನು ನಿಸ್ವಾರ್ಥ ಮನೋಭಾವದಿಂದ ಮಲ್ಲೇಶ್ ಮಾಡುತ್ತಿದ್ದು, ಇಂದು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬದ ಅಂಗವಾಗಿ ಹಸಿದವರಿಗೆ ಆಹಾರ ವಿತರಣೆ, ವಯೋವೃದ್ದರಿಗೆ ಹೊದಿಕೆ ಹಾಗೂ ವಸ್ತ್ರ ವಿತರಣೆ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ ಮಾಡುವ ಮೂಲಕ ಆಚರಿಸಿದ್ದೇವೆ. ನೂರಾರು ಯುವಕರಿಗೆ ಮಾದರಿಯಾಗಿರುವ ಗಂಟಿಗಾನಹಳ್ಳಿ ಸಂದೀಪ್ ಅವರ ಸೇವಾ ಕಾರ್ಯಗಳಿಂದಲೇ ಚಿರಪರಿಚಿತರು ಅವರ ಸೇವೆ ಸಮಾಜಕ್ಕೆ ಮತ್ತಷ್ಟು ಲಭಿಸಲಿ ಎಂದು ಶುಭ ಹಾರೈಸುತ್ತೇವೆ ಎಂದರು.
ಮುಖಂಡರಾದ ರಾಜಘಟ್ಟ ಹರೀಶ್ ಮಾತನಾಡಿ, ನಿರಂತರ ಅನ್ನದಾಸೋಹ ಸಮಿತಿಯ ಜೊತೆಗೂಡಿ ಅಭಿಮಾನಿಗಳೆಲ್ಲರೂ ಒಟ್ಟಾಗಿ ಸಂದೀಪ್ ಅವರ ಹುಟ್ಟು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ. ಇಂದು ನೂರಾರು ವಯೋವೃದ್ಧರು, ನಿರಾಶ್ರಿತರು, ಮಕ್ಕಳ ಅಗತ್ಯತೆ ಪೂರೈಸುವ ಮೂಲಕ ಸಂಭ್ರಮಿಸುತ್ತಿರುವುದು ಅರ್ಥಪೂರ್ಣವಾಗಿದೆ ಇದಲ್ಲದೆ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಸಮಾಜ ಸೇವಕ ಸಂದೀಪ್ ರವರು ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
ಈ ವೇಳೆ ಬಿಡಿಗೆರೆ ರವಿಕುಮಾರ್, ಗಂಡರಾಜಾಪುರ ಅರುಣ್, ರಾಜಘಟ್ಟ ಹರೀಶ್, ಅನ್ನದಾಸೋಹಿ ಮಲ್ಲೇಶ್, ಸಮಾಜಸೇವಕರಾದ ಸೇಲ್ವಮ್, ಯೋಗ ಕೃಷ್ಣಪ್ಪ, ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…