ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ, ವಯೋವೃದ್ಧರಿಗೆ ಹೊದಿಕೆ ಹಾಗೂ ವಸ್ತ್ರವಿತರಣೆ ಜೊತೆಗೆ ನಿರಾಶ್ರಿತ ಕಡುಬಡವರಿಗೆ ಅನ್ನದಾಸೋಹ ಮಾಡುವ ಮೂಲಕ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದರು.
ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ತಮ್ಮ ನೆಚ್ಚಿನ ನಾಯಕರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು
ಈ ವೇಳೆ ಕಾರ್ಯಕ್ರಮದಲ್ಲಿ ದಾನಿಗಳಾದ ಬಿಡಿಗೆರೆ ರವಿಕುಮಾರ್ ಮಾತನಾಡಿ 2319 ದಿನಗಳಿಂದ ನಿರಂತರವಾಗಿ ಆಹಾರ ವಿತರಣೆ ಮಾಡುವ ಮೂಲಕ ಹಸಿವು ನೀಗಿಸುವ ಕಾರ್ಯವನ್ನು ನಿಸ್ವಾರ್ಥ ಮನೋಭಾವದಿಂದ ಮಲ್ಲೇಶ್ ಮಾಡುತ್ತಿದ್ದು, ಇಂದು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬದ ಅಂಗವಾಗಿ ಹಸಿದವರಿಗೆ ಆಹಾರ ವಿತರಣೆ, ವಯೋವೃದ್ದರಿಗೆ ಹೊದಿಕೆ ಹಾಗೂ ವಸ್ತ್ರ ವಿತರಣೆ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ ಮಾಡುವ ಮೂಲಕ ಆಚರಿಸಿದ್ದೇವೆ. ನೂರಾರು ಯುವಕರಿಗೆ ಮಾದರಿಯಾಗಿರುವ ಗಂಟಿಗಾನಹಳ್ಳಿ ಸಂದೀಪ್ ಅವರ ಸೇವಾ ಕಾರ್ಯಗಳಿಂದಲೇ ಚಿರಪರಿಚಿತರು ಅವರ ಸೇವೆ ಸಮಾಜಕ್ಕೆ ಮತ್ತಷ್ಟು ಲಭಿಸಲಿ ಎಂದು ಶುಭ ಹಾರೈಸುತ್ತೇವೆ ಎಂದರು.
ಮುಖಂಡರಾದ ರಾಜಘಟ್ಟ ಹರೀಶ್ ಮಾತನಾಡಿ, ನಿರಂತರ ಅನ್ನದಾಸೋಹ ಸಮಿತಿಯ ಜೊತೆಗೂಡಿ ಅಭಿಮಾನಿಗಳೆಲ್ಲರೂ ಒಟ್ಟಾಗಿ ಸಂದೀಪ್ ಅವರ ಹುಟ್ಟು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ. ಇಂದು ನೂರಾರು ವಯೋವೃದ್ಧರು, ನಿರಾಶ್ರಿತರು, ಮಕ್ಕಳ ಅಗತ್ಯತೆ ಪೂರೈಸುವ ಮೂಲಕ ಸಂಭ್ರಮಿಸುತ್ತಿರುವುದು ಅರ್ಥಪೂರ್ಣವಾಗಿದೆ ಇದಲ್ಲದೆ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಸಮಾಜ ಸೇವಕ ಸಂದೀಪ್ ರವರು ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
ಈ ವೇಳೆ ಬಿಡಿಗೆರೆ ರವಿಕುಮಾರ್, ಗಂಡರಾಜಾಪುರ ಅರುಣ್, ರಾಜಘಟ್ಟ ಹರೀಶ್, ಅನ್ನದಾಸೋಹಿ ಮಲ್ಲೇಶ್, ಸಮಾಜಸೇವಕರಾದ ಸೇಲ್ವಮ್, ಯೋಗ ಕೃಷ್ಣಪ್ಪ, ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…