ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ, ವಯೋವೃದ್ಧರಿಗೆ ಹೊದಿಕೆ ಹಾಗೂ ವಸ್ತ್ರವಿತರಣೆ ಜೊತೆಗೆ ನಿರಾಶ್ರಿತ ಕಡುಬಡವರಿಗೆ ಅನ್ನದಾಸೋಹ ಮಾಡುವ ಮೂಲಕ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದರು.

ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ತಮ್ಮ ನೆಚ್ಚಿನ ನಾಯಕರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು

ಈ ವೇಳೆ ಕಾರ್ಯಕ್ರಮದಲ್ಲಿ ದಾನಿಗಳಾದ ಬಿಡಿಗೆರೆ ರವಿಕುಮಾರ್ ಮಾತನಾಡಿ 2319 ದಿನಗಳಿಂದ ನಿರಂತರವಾಗಿ ಆಹಾರ ವಿತರಣೆ ಮಾಡುವ ಮೂಲಕ ಹಸಿವು ನೀಗಿಸುವ ಕಾರ್ಯವನ್ನು ನಿಸ್ವಾರ್ಥ ಮನೋಭಾವದಿಂದ ಮಲ್ಲೇಶ್ ಮಾಡುತ್ತಿದ್ದು, ಇಂದು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬದ ಅಂಗವಾಗಿ ಹಸಿದವರಿಗೆ ಆಹಾರ ವಿತರಣೆ, ವಯೋವೃದ್ದರಿಗೆ ಹೊದಿಕೆ ಹಾಗೂ ವಸ್ತ್ರ ವಿತರಣೆ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ ಮಾಡುವ ಮೂಲಕ ಆಚರಿಸಿದ್ದೇವೆ. ನೂರಾರು ಯುವಕರಿಗೆ ಮಾದರಿಯಾಗಿರುವ ಗಂಟಿಗಾನಹಳ್ಳಿ ಸಂದೀಪ್ ಅವರ ಸೇವಾ ಕಾರ್ಯಗಳಿಂದಲೇ ಚಿರಪರಿಚಿತರು ಅವರ ಸೇವೆ ಸಮಾಜಕ್ಕೆ ಮತ್ತಷ್ಟು ಲಭಿಸಲಿ ಎಂದು ಶುಭ ಹಾರೈಸುತ್ತೇವೆ ಎಂದರು.

ಮುಖಂಡರಾದ ರಾಜಘಟ್ಟ ಹರೀಶ್ ಮಾತನಾಡಿ, ನಿರಂತರ ಅನ್ನದಾಸೋಹ ಸಮಿತಿಯ ಜೊತೆಗೂಡಿ ಅಭಿಮಾನಿಗಳೆಲ್ಲರೂ ಒಟ್ಟಾಗಿ ಸಂದೀಪ್ ಅವರ ಹುಟ್ಟು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ. ಇಂದು ನೂರಾರು ವಯೋವೃದ್ಧರು, ನಿರಾಶ್ರಿತರು, ಮಕ್ಕಳ ಅಗತ್ಯತೆ ಪೂರೈಸುವ ಮೂಲಕ ಸಂಭ್ರಮಿಸುತ್ತಿರುವುದು ಅರ್ಥಪೂರ್ಣವಾಗಿದೆ ಇದಲ್ಲದೆ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಸಮಾಜ ಸೇವಕ ಸಂದೀಪ್ ರವರು ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.

ಈ ವೇಳೆ ಬಿಡಿಗೆರೆ ರವಿಕುಮಾರ್, ಗಂಡರಾಜಾಪುರ ಅರುಣ್, ರಾಜಘಟ್ಟ ಹರೀಶ್, ಅನ್ನದಾಸೋಹಿ ಮಲ್ಲೇಶ್, ಸಮಾಜಸೇವಕರಾದ ಸೇಲ್ವಮ್, ಯೋಗ ಕೃಷ್ಣಪ್ಪ, ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

23 hours ago