ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ, ವಯೋವೃದ್ಧರಿಗೆ ಹೊದಿಕೆ ಹಾಗೂ ವಸ್ತ್ರವಿತರಣೆ ಜೊತೆಗೆ ನಿರಾಶ್ರಿತ ಕಡುಬಡವರಿಗೆ ಅನ್ನದಾಸೋಹ ಮಾಡುವ ಮೂಲಕ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದರು.
ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ತಮ್ಮ ನೆಚ್ಚಿನ ನಾಯಕರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು
ಈ ವೇಳೆ ಕಾರ್ಯಕ್ರಮದಲ್ಲಿ ದಾನಿಗಳಾದ ಬಿಡಿಗೆರೆ ರವಿಕುಮಾರ್ ಮಾತನಾಡಿ 2319 ದಿನಗಳಿಂದ ನಿರಂತರವಾಗಿ ಆಹಾರ ವಿತರಣೆ ಮಾಡುವ ಮೂಲಕ ಹಸಿವು ನೀಗಿಸುವ ಕಾರ್ಯವನ್ನು ನಿಸ್ವಾರ್ಥ ಮನೋಭಾವದಿಂದ ಮಲ್ಲೇಶ್ ಮಾಡುತ್ತಿದ್ದು, ಇಂದು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬದ ಅಂಗವಾಗಿ ಹಸಿದವರಿಗೆ ಆಹಾರ ವಿತರಣೆ, ವಯೋವೃದ್ದರಿಗೆ ಹೊದಿಕೆ ಹಾಗೂ ವಸ್ತ್ರ ವಿತರಣೆ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ ಮಾಡುವ ಮೂಲಕ ಆಚರಿಸಿದ್ದೇವೆ. ನೂರಾರು ಯುವಕರಿಗೆ ಮಾದರಿಯಾಗಿರುವ ಗಂಟಿಗಾನಹಳ್ಳಿ ಸಂದೀಪ್ ಅವರ ಸೇವಾ ಕಾರ್ಯಗಳಿಂದಲೇ ಚಿರಪರಿಚಿತರು ಅವರ ಸೇವೆ ಸಮಾಜಕ್ಕೆ ಮತ್ತಷ್ಟು ಲಭಿಸಲಿ ಎಂದು ಶುಭ ಹಾರೈಸುತ್ತೇವೆ ಎಂದರು.
ಮುಖಂಡರಾದ ರಾಜಘಟ್ಟ ಹರೀಶ್ ಮಾತನಾಡಿ, ನಿರಂತರ ಅನ್ನದಾಸೋಹ ಸಮಿತಿಯ ಜೊತೆಗೂಡಿ ಅಭಿಮಾನಿಗಳೆಲ್ಲರೂ ಒಟ್ಟಾಗಿ ಸಂದೀಪ್ ಅವರ ಹುಟ್ಟು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ. ಇಂದು ನೂರಾರು ವಯೋವೃದ್ಧರು, ನಿರಾಶ್ರಿತರು, ಮಕ್ಕಳ ಅಗತ್ಯತೆ ಪೂರೈಸುವ ಮೂಲಕ ಸಂಭ್ರಮಿಸುತ್ತಿರುವುದು ಅರ್ಥಪೂರ್ಣವಾಗಿದೆ ಇದಲ್ಲದೆ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಸಮಾಜ ಸೇವಕ ಸಂದೀಪ್ ರವರು ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
ಈ ವೇಳೆ ಬಿಡಿಗೆರೆ ರವಿಕುಮಾರ್, ಗಂಡರಾಜಾಪುರ ಅರುಣ್, ರಾಜಘಟ್ಟ ಹರೀಶ್, ಅನ್ನದಾಸೋಹಿ ಮಲ್ಲೇಶ್, ಸಮಾಜಸೇವಕರಾದ ಸೇಲ್ವಮ್, ಯೋಗ ಕೃಷ್ಣಪ್ಪ, ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…