ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ವಿತರಿಸುವ ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಶಿರಸಿ ನಗರ ಪೊಲೀಸರ ಕಾರ್ಯಚರಣೆ ನಡೆಸಿ ಬಂಧನ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.
ಶಿರಸಿಯ ಚಿಪಗಿ ನರೆಬೈಲ್ ನಿವಾಸಿ ಉಬೇದ್ ಅಲಿಯಾಸ್ ಸಲೀಂ ಜವಳಿ ಎಂಬಾತ ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಯೋಜನೆಯ 40 ಕ್ವಿಂಟಾಲ್ ಅಕ್ಕಿಯನ್ನು ಖರೀದಿಸಿ, ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದನು. ಈ ಅಕ್ಕಿಯನ್ನು ಇಸಳೂರು, ಶಿರಸಿ ನಿವಾಸಿ ಸುನೀಲ್ ಮಹಾದೇವಪ್ಪ ನಾಡಗಿ ಎಂಬಾತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಖರೀದಿಸಿದ್ದನು.
ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಟಾಟಾ ಕಂಪನಿಯ 407 ವಾಹನದಲ್ಲಿ ಈ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾಗ, ಶಿರಸಿಯ ಮಂಗಳೂರು ಹೋಟೆಲ್ ಕ್ರಾಸ್ ಬಳಿ ಪೊಲೀಸರು ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸುನೀಲ್ ಮಹಾದೇವಪ್ಪ ನಾಡಗಿ (ಈಸಳೂರು, ಶಿರಸಿ) ಮತ್ತು ಅಲ್ತಾಫ್ ರೆಹಮತ್ ಉಲ್ಲಾ ಶೇಖ್ (ಕಸ್ತೂರ ಬಾ ನಗರ, ಶಿರಸಿ) ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹1,36,000 ಬೆಲೆ ಬಾಳುವ 40 ಕ್ವಿಂಟಾಲ್ (50 ಕೆ.ಜಿ. ತೂಕದ 80 ಚೀಲ) ಪಡಿತರ ಅಕ್ಕಿ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಅಂದಾಜು ₹4,50,000 ಮೌಲ್ಯದ ಟಾಟಾ 407 ವಾಹನವನ್ನು ಜಪ್ತಿ ಮಾಡಲಾಗಿದೆ. ಒಟ್ಟು ₹5,86,000 ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಜಗದೀಶ್ ನಾಯ್ಕ್ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ, ಶಿರಸಿ ತಹಶೀಲ್ದಾರ್ ಪುಟ್ಟರಾಜಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಶಿರಸಿ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ, ಆಹಾರ ನಿರೀಕ್ಷಕರಾದ ಕವಿತಾ ಪಾಟನಕರ್, ಸಿಬ್ಬಂದಿ ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಕಬಾಡಿ, ಸುದರ್ಶನ ನಾಯ್ಕ, ಸುನೀಲ್ ಹಂಡಲಗಿ, ರಾಜಶೇಖರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…