ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮ ಸಾಗಾಟ,‌ ಮಾರಾಟ: 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನ ಜಪ್ತಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ವಿತರಿಸುವ ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಶಿರಸಿ ನಗರ ಪೊಲೀಸರ ಕಾರ್ಯಚರಣೆ ನಡೆಸಿ ಬಂಧನ ಮಾಡಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.

ಶಿರಸಿಯ ಚಿಪಗಿ ನರೆಬೈಲ್ ನಿವಾಸಿ ಉಬೇದ್ ಅಲಿಯಾಸ್ ಸಲೀಂ ಜವಳಿ ಎಂಬಾತ ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಯೋಜನೆಯ 40 ಕ್ವಿಂಟಾಲ್ ಅಕ್ಕಿಯನ್ನು ಖರೀದಿಸಿ, ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದನು. ಈ ಅಕ್ಕಿಯನ್ನು ಇಸಳೂರು, ಶಿರಸಿ ನಿವಾಸಿ ಸುನೀಲ್ ಮಹಾದೇವಪ್ಪ ನಾಡಗಿ ಎಂಬಾತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಖರೀದಿಸಿದ್ದನು.

ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಟಾಟಾ ಕಂಪನಿಯ 407 ವಾಹನದಲ್ಲಿ ಈ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾಗ, ಶಿರಸಿಯ ಮಂಗಳೂರು ಹೋಟೆಲ್ ಕ್ರಾಸ್ ಬಳಿ ಪೊಲೀಸರು ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಸುನೀಲ್ ಮಹಾದೇವಪ್ಪ ನಾಡಗಿ (ಈಸಳೂರು, ಶಿರಸಿ) ಮತ್ತು ಅಲ್ತಾಫ್ ರೆಹಮತ್ ಉಲ್ಲಾ ಶೇಖ್ (ಕಸ್ತೂರ ಬಾ ನಗರ, ಶಿರಸಿ) ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹1,36,000 ಬೆಲೆ ಬಾಳುವ 40 ಕ್ವಿಂಟಾಲ್ (50 ಕೆ.ಜಿ. ತೂಕದ 80 ಚೀಲ) ಪಡಿತರ ಅಕ್ಕಿ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಅಂದಾಜು ₹4,50,000 ಮೌಲ್ಯದ ಟಾಟಾ 407 ವಾಹನವನ್ನು ಜಪ್ತಿ ಮಾಡಲಾಗಿದೆ. ಒಟ್ಟು ₹5,86,000 ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿರಸಿ ನಗರ  ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಜಗದೀಶ್ ನಾಯ್ಕ್ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ, ಶಿರಸಿ ತಹಶೀಲ್ದಾರ್  ಪುಟ್ಟರಾಜಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಶಿರಸಿ ನಗರ ಠಾಣೆಯ ಪಿಎಸ್‌ಐ ನಾಗಪ್ಪ ಬಿ, ಆಹಾರ ನಿರೀಕ್ಷಕರಾದ ಕವಿತಾ ಪಾಟನಕರ್, ಸಿಬ್ಬಂದಿ ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಕಬಾಡಿ, ಸುದರ್ಶನ ನಾಯ್ಕ, ಸುನೀಲ್ ಹಂಡಲಗಿ, ರಾಜಶೇಖರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

2 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

4 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

10 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

11 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

13 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

22 hours ago